ಬಜೆಟ್​ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ

Updated on: Feb 01, 2025 | 11:00 AM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಸಾಂಪ್ರದಾಯಿಕ ಸೂಚನೆಯ ಭಾಗವಾಗಿ, ರಾಷ್ಟ್ರಪತಿ ಮುರ್ಮು ನಿರ್ಮಲಾ ಸೀತಾರಾಮನ್‌ ಅವರಿಗೆ 'ದಹಿ-ಚೀನಿ' (ಮೊಸರು ಮತ್ತು ಸಕ್ಕರೆ) ನೀಡಿದರು. ಇದು ಯಶಸ್ವಿ ಬಜೆಟ್ ಪ್ರಸ್ತುತಿಗಾಗಿ ಅದೃಷ್ಟ ಮತ್ತು ಆಶೀರ್ವಾದವನ್ನು ಸಂಕೇತಿಸುತ್ತದೆ.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಇದಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊಸರು-ಸಕ್ಕರೆ (ದಹಿ-ಚೀನಿ) ತಿನ್ನಿಸುವ ಮೂಲಕ ಶುಭ ಹಾರೈಸಿದರು. ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿಯನ್ನು ಭೇಟಿಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ದ್ರೌಪದಿ ಮುರ್ಮು ಮೊಸರು-ಸಕ್ಕರೆ ತಿನ್ನಿಸಿದರು. ಇದು ಯಶಸ್ವಿ ಬಜೆಟ್ ಪ್ರಸ್ತುತಿಗಾಗಿ ಅದೃಷ್ಟ ಮತ್ತು ಆಶೀರ್ವಾದವನ್ನು ಸಂಕೇತಿಸುತ್ತದೆ. ಪ್ರತಿ ಬಾರಿ ಬಜೆಟ್ ಮಂಡನೆ ವೇಳೆಯೂ ಈ ಸಂಪ್ರದಾಯವನ್ನು ಅನುಸರಿಸಲಾಗುತ್ತದೆ.

ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್- 2025 ಮಂಡಿಸಲು ಸಜ್ಜಾಗಿದ್ದಾರೆ. ಅವರು ಸಾಂಪ್ರದಾಯಿಕ ‘ಬಹಿ ಖಾತಾ’ ಬದಲಿಗೆ ಟ್ಯಾಬ್ ಮೂಲಕ ಬಜೆಟ್ ಅನ್ನು ಮಂಡಿಸುತ್ತಾರೆ ಮತ್ತು ಓದುತ್ತಾರೆ. ಇದು ನಿರ್ಮಲಾ ಸೀತಾರಾಮನ್ ಅವರ 8ನೇ ಬಜೆಟ್ ಮಂಡನೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us