ಸಿದ್ದರಾಮಯ್ಯ ಮಂಡಿಸಿದ್ದು ಕೇವಲ ಮುಸಲ್ಮಾನರಿಗೆ ವಿಶೇಷ ಪ್ಯಾಕೇಜ್​ಗಳನ್ನು ಕಲ್ಪಿಸುವ ಬಜೆಟ್: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2025 | 4:22 PM

ಮುಸಲ್ಮಾನ ವಿದ್ಯಾರ್ಥಿಗಳು ವಿದೇಶಗಳಲ್ಲಿ ವ್ಯಾಸಂಗ ಮಾಡಲಿ ಸರ್ಕಾರದಿಂದ ಸಿಗುತ್ತಿದ್ದ ನೆರವನ್ನು ರೂ. 20 ಲಕ್ಷದಿಂದ ₹ 30 ಲಕ್ಷಕ್ಕೆ ಸಿದ್ದರಾಮಯ್ಯ ಹೆಚ್ಚಿಸಿದ್ದಾರೆ, ಮುಸ್ಲಿಂ ಮಹಿಳೆಯರ ಆತ್ಮರಕ್ಷಣೆಗೆ ಅಂತ ಬಜೆಟ್ ನಲ್ಲಿ ಹಣವನ್ನು ತೆಗೆದಿರಿಸಿದ್ದಾರೆ, ಹಿಂದೂ ವಿದ್ಯಾರ್ಥಿಗಳು ಮತ್ತು ಹಿಂದೂ ಮಹಿಳೆಯರ ಬಗ್ಗೆ ಸಿದ್ದರಾಮಯ್ಯನವರಿಗೆ ಯೋಚನೆ ಬರಲಿಲ್ಲವೇ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಬೆಂಗಳೂರು ಮಾರ್ಚ್ 8: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಂಡಿಸಿದ್ದು 16ನೇ ಮತ್ತು ತಮ್ಮ ರಾಜಕೀಯ ಬದುಕಿನ ಕೊನೆಯ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನಿಂದ ಯಾರಿಗೂ ಅನುಕೂಲವಿಲ್ಲ, ಬಿಜೆಟ್ ನಲ್ಲಿ ಕೃಷಿ ಕ್ಷೇತ್ರ, ರೈತರು, ಮಹಿಳೆಯರು, ಯುವಕರನ್ನು ಕೈಬಿಟ್ಟು ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಅನ್ನು  ಮುಖ್ಯಮಂತ್ರಿ ಮಂಡಿಸಿದ್ದಾರೆ, ಮುಸಲ್ಮಾನರ ಓಲೈಕೆಗೆ ಅವರು ಈ ಮಟ್ಟಕ್ಕಿಳಿಯುತ್ತಾರೆ ಅಂತ ಎಣಿಸಿರಲಿಲ್ಲ ಎಂದು ವಿಜಯೇಂದ್ರ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಾರ್ಷಿಕ ₹ 233 ಕೋಟಿ ಖರ್ಚಾಗುತ್ತದೆ: ಸಿದ್ದರಾಮಯ್ಯ

Published on: Mar 08, 2025 03:24 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.