Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿ ಬೇಟೆಗೆ ಇಟ್ಟಿದ್ದ ನಾಡ ಬಾಂಬ್ ತಿಂದ ಎಮ್ಮೆ ಬಾಯಿ ಛಿದ್ರ..ನರಳಿ ನರಳಿ ಪ್ರಾಣಬಿಟ್ಟಿತು

ಪ್ರಾಣಿ ಬೇಟೆಗೆ ಇಟ್ಟಿದ್ದ ನಾಡ ಬಾಂಬ್ ತಿಂದ ಎಮ್ಮೆ ಬಾಯಿ ಛಿದ್ರ..ನರಳಿ ನರಳಿ ಪ್ರಾಣಬಿಟ್ಟಿತು

ರಮೇಶ್ ಬಿ. ಜವಳಗೇರಾ
|

Updated on: Feb 04, 2025 | 3:59 PM

ಹಸುಗಳ ಮೇಲೆ ದಾಳಿ ಪ್ರಕರಣ ಬೆನ್ನಲ್ಲೇ ಇದೀಗ ಪ್ರಾಣಿ ಬೇಟೆಗೆ ಇಟ್ಟಿದ್ದ ನಾಡ ಬಾಂಬ್ ತಿಂದ ಎಮ್ಮೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಹುಲ್ಲು ಮೇಯುತ್ತಿದ್ದಾಗ ನಾಡಬಾಂಬ್ ತಿಂದಿದೆ. ಆ ವೇಳೆ ಬಾಯಲ್ಲೇ ನಾಡಬಾಂಬ್ ಸ್ಫೋಟಗೊಂಡಿದ್ದು, ಬಾಯಿ ಛಿದ್ರ ಛಿದ್ರವಾಗಿದೆ. ಬಳಿಕ ನರಳಿ ನರಳಿ ಪ್ರಾಣ ಬಿಟ್ಟಿದೆ. ಈ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಕ್ರಮವಾಗಬೇಕೆಂದು ಜನರು ಒತ್ತಾಯಿಸಿದ್ದಾರೆ.

ಹಾವೇರಿ, (ಫೆಬ್ರವರಿ 04): ಕಾಡುಹಂದಿ ಬೇಟೆಯಾಡಲು ಇಟ್ಟಿದ್ದ ನಾಡ ಬಾಂಬ್ ತಿಂದು ಎಮ್ಮೆ ತೀವ್ರವಾಗಿ ಗಾಯಗೊಂಡಿದ್ದು, ನರಳಿ ನರಳಿ ಪ್ರಾಣ ಬಿಟ್ಟಿದೆ. ಈ ದುರ್ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೊಸಕೊಪ್ಪದಲ್ಲಿ ನಡೆದಿದೆ. ರೈತ ಬಾಷಾಸಾಬ್ ಬಂಕಾಪುರಗೆ ಸೇರಿದ ಎಮ್ಮೆ ಹುಲ್ಲು ಮೇಯುತ್ತಿದ್ದಾಗ ನಾಡಬಾಂಬ್ ತಿಂದಿದೆ. ಈ ವೇಳೆ ನಾಡಬಾಂಬ್ ಎಮ್ಮೆ ಬಾಯಲ್ಲೇ ಸ್ಫೋಟಗೊಂಡಿದೆ. ಇದರಿಂದ ಎಮ್ಮೆ ಬಾಯಿ ಛಿದ್ರ ಛಿದ್ರವಾಗಿದ್ದು, ಬಳಿಕ ನರಳಿ ನರಳಿ ಸಾವನ್ನಪ್ಪಿದೆ. ಯಾರೋ ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದು ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.