ನಿಮ್ಮ ಎದೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ; ಚಪ್ಪಲಿ ಎಸೆದವರಿಗೆ ಬಿಹಾರದ ಡಿಸಿಎಂ ಎಚ್ಚರಿಕೆ

Updated on: Nov 06, 2025 | 4:44 PM

ತಮ್ಮ ಮೇಲೆ ನಡೆದ ದಾಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ವಿಜಯ್ ಕುಮಾರ್ ಸಿನ್ಹಾ, ಆ ಪ್ರತಿಭಟನಾಕಾರರು ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿತ ಗೂಂಡಾಗಳು ಎಂದು ಅವರು ಆರೋಪಿಸಿದ್ದಾರೆ. "ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ನಾವು ಈ ರೀತಿ ದಾಳಿ ನಡೆಸಿದವರ ಎದೆಯ ಮೇಲೆ ಬುಲ್ಡೋಜರ್‌ಗಳನ್ನು ಓಡಿಸುತ್ತೇವೆ" ಎಂದು ವಿಜಯ್ ಕುಮಾರ್ ಸಿನ್ಹಾ ಕಿಡಿಕಾರಿದ್ದಾರೆ.

ಪಾಟ್ನಾ, ನವೆಂಬರ್ 6: ಬಿಹಾರದ (Bihar) ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕ್ಷೇತ್ರವಾದ ಲಖಿಸರೈನಲ್ಲಿ ಇಂದು ಮತಗಟ್ಟೆಗಳಿಗೆ ಭೇಟಿ ನೀಡುವಾಗ ಅವರ ಕಾರಿನ ಮೇಲೆ ಜನರು ಚಪ್ಪಲಿ, ಕಲ್ಲು, ಸಗಣಿಯನ್ನು ಎಸೆದಿದ್ದಾರೆ. ಅಲ್ಲದೆ, “ಮುರ್ದಾಬಾದ್” ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿಯಿಂದ 3 ಬಾರಿ ಶಾಸಕರಾಗಿರುವ ವಿಜಯ್ ಕುಮಾರ್ ಸಿನ್ಹಾ ಈ ಬಾರಿಯೂ ತಮ್ಮ ತವರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ.

ತಮ್ಮ ಮೇಲೆ ನಡೆದ ದಾಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ವಿಜಯ್ ಕುಮಾರ್ ಸಿನ್ಹಾ, ಆ ಪ್ರತಿಭಟನಾಕಾರರು ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿತ ಗೂಂಡಾಗಳು ಎಂದು ಅವರು ಆರೋಪಿಸಿದ್ದಾರೆ. “ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ನಾವು ಈ ರೀತಿ ದಾಳಿ ನಡೆಸಿದವರ ಎದೆಯ ಮೇಲೆ ಬುಲ್ಡೋಜರ್‌ಗಳನ್ನು ಓಡಿಸುತ್ತೇವೆ” ಎಂದು ವಿಜಯ್ ಕುಮಾರ್ ಸಿನ್ಹಾ ಕಿಡಿಕಾರಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 06, 2025 04:43 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More