ಕಾನ್ಪುರದಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್; ಕಿಟಕಿ ಒಡೆದು ಪ್ರಯಾಣಿಕರು ಪಾರು
ನವೆಂಬರ್ 28: ಇತ್ತೀಚೆಗೆ ಸಾಲು-ಸಾಲಾಗಿ ಬಸ್ ಬೆಂಕಿ ದುರಂತದ ಘಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ ವೇಗವಾಗಿ ಹೋಗುತ್ತಿದ್ದುದರಿಂದ ಆ ಬಸ್ಗೆ ಹೊತ್ತಿದ ಬೆಂಕಿ ಇಡೀ ಬಸ್ಗೆ ಆವರಿಸಿ ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ದೆಹಲಿಯಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದ ಬಸ್ ಇಂದು ಬೆಳಿಗ್ಗೆ 10.30ರ ಸುಮಾರಿಗೆ ನೌಬಸ್ತಾ-ರಾಮದೇವಿ ರಾಷ್ಟ್ರೀಯ ಹೆದ್ದಾರಿಯ ಬಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಕಾನ್ಪುರ, ನವೆಂಬರ್ 28: ಇತ್ತೀಚೆಗೆ ಸಾಲು-ಸಾಲಾಗಿ ಬಸ್ ಬೆಂಕಿ ದುರಂತದ ಘಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಬಸ್ ವೇಗವಾಗಿ ಹೋಗುತ್ತಿದ್ದುದರಿಂದ ಆ ಬಸ್ಗೆ ಹೊತ್ತಿದ ಬೆಂಕಿ ಇಡೀ ಬಸ್ಗೆ ಆವರಿಸಿ ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು.
ದೆಹಲಿಯಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದ ಬಸ್ ಇಂದು ಬೆಳಿಗ್ಗೆ 10.30ರ ಸುಮಾರಿಗೆ ನೌಬಸ್ತಾ-ರಾಮದೇವಿ ರಾಷ್ಟ್ರೀಯ ಹೆದ್ದಾರಿಯ ಬಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಪ್ರಯಾಣಿಕರು ಕಿಟಕಿ ಗಾಜುಗಳನ್ನು ಮುರಿದು ಅಪಾಯದಿಂದ ಪಾರಾಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

