ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್: ಆಸ್ಪತ್ರೆ ಮುಂದೆಯೇ ಅಪಘಾತ!
ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ 11 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಡ್ಡಬಂದ ಕಾರು ತಪ್ಪಿಸಲು ಬಸ್ ಚಾಲಕ ಯತ್ನಿಸಿದ್ದು, ಈ ವೇಳೆ ಅಪಘಾತ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್ ಮರಕ್ಕೆ ಗುದ್ದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ, ಮಾರ್ಚ್ 15: ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us