ಇದು ದಸರಾ ಹಬ್ಬದ ವೀಕೆಂಡ್, ಬಸ್ ನಿಲ್ದಾಣ ಮತ್ತು ಬಸ್ಸುಗಳು ಫುಲ್ ರಶ್!

ಅರುಣ್​ ಕುಮಾರ್​ ಬೆಳ್ಳಿ

Updated on: Oct 10, 2024 | 6:55 PM

ಬೆಂಗಳೂರಿಂದ ದೂರದ ಊರುಗಳಿಗೆ ತೆರಳುವವರಿಗೆ ಮಳೆರಾಯ ತೊಂದರೆ ಕೊಡಲಾರಂಭಿಸಿದ್ದಾನೆ. ಹವಾಮಾನ ಇಲಾಖೆಯ ನೀಡಿರುವ ಮುನ್ಸೂಚನೆ ಪ್ರಕಾರ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಅಕ್ಟೋಬರ್ 14ರವರೆಗೆ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು: ಇವತ್ತಿನ್ನೂ ಗುರುವಾರ ಹಾಗಾಗಿ ವೀಕೆಂಡ್ ಅಲ್ಲ, ಆದರೆ ಇದು ಹಬ್ಬವನ್ನೊಳಗೊಂಡ ವೀಕೆಂಡ್. ಇವತ್ತು ಆಯುಧ ಪೂಜೆ, 12 ರಂದು ವಿಜಯದಶಮಿ, 13 ಸಂಡೇ-ಹಾಗಾಗಿ ಜನ ದಸರಾ ಹಬ್ಬ ಆಚರಿಸಲು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ನಗರದ ಕೆಂಪೇಗೌಡ ಬಸ್ ಟರ್ಮಿನಲ್​​ನಲ್ಲಿ ಇಂದು ಸಾಯಂಕಾಲ ಕಂಡುಬಂದ ದೃಶ್ಯವಿದು. ಹೆಚ್ಚುಕಡಿಮೆ ಎಲ್ಲ ಬಸ್ ಗಳು ಫುಲ್. ಮುಂಗಡ ಬುಕ್ಕಿಂಗ್ ಮಾಡಿಕೊಂಡವರಿಗೆ ಸುಖಕರ ಪ್ರಯಾಣ, ಮಾಡದವರಿಗೆ ಬಸ್ಸಲ್ಲಿ ತಳ್ಳಾಟ-ನೂಕಾಟ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅರಮನೆಯ ಆಯುಧ ಮತ್ತು ವಾಹನಗಳಿಗೆ ಯದುವೀರ್ ಪೂಜೆ ಸಲ್ಲಿಸುವುದನ್ನು ಆಸ್ಥೆ ಮತ್ತು ಕುತೂಹಲದಿಂದ ವೀಕ್ಷಿಸಿದ ಪುಟಾಣಿ ಆದ್ಯವೀರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.