Assembly Polls: ಚುನಾವಣಾ ದಿನಾಂಕ ಘೋಷಣೆ, ಚಟುವಟಿಕೆಗಳ ಕೆಂದ್ರವಾದ ಸಿದ್ದರಾಮಯ್ಯ ಮೈಸೂರು ನಿವಾಸ

|

Updated on: Mar 29, 2023 | 12:14 PM

ಮುಖಂಡರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಜವಾಬ್ದಾರಿಗಳನ್ನು ಹಂಚಿಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯನವರ (Siddaramaiah) ಮೈಸೂರು ನಿವಾಸ ಚಟುವಟಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ. ವರುಣಾ (Varuna) ಮತ್ತು ಚಾಮುಂಡೇಶ್ವರಿ (Chamundeshwari) ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರ ನಿವಾಸಕ್ಕೆ ಆಗಮಿಸಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಜವಾಬ್ದಾರಿಗಳನ್ನು (responsibilities) ಹಂಚಿಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮುದಾಯದ  ಶಿವಸುಜ್ಞಾನ ಮೂರ್ತಿ ಮಹಾಸ್ವಾಮೀಜಿ ತಮ್ಮ ವಟುಗಳೊಂದಿಗೆ ಅಲ್ಲಿಗೆ ಆಗಮಿಸಿ ಸಿದ್ದರಾಮಯ್ಯರನ್ನು ಭೇಟಿಯಾದರು. ವರುಣಾ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ (Dr Yatindra Siddaramaiah) ಮತ್ತು ಮಾವಿನಹಳ್ಳಿ ಸಿದ್ದೇಗೌಡ ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Wed, 29 March 23

Follow us on