Assembly Polls: ಬಿವೈ ವಿಜಯೇಂದ್ರಗೆ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಬಿಟ್ಟು ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಕಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 24, 2023 | 12:30 PM

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳು ವಿಜಯೇಂದ್ರಗೆ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಅಂತ ಕೇಳಿದಾಗ ಅವರು, ಶಿಕಾರಿಪುರದ ಪ್ರತಿ ಹಳ್ಳಿಗೆ ಭೇಟಿ ನೀಡಿ ಜನರೊಂದಿಗೆ ಮಾತಾಡುತ್ತಿರುವುದಾಗಿ ಹೇಳಿದರು.

ಬೆಂಗಳೂರು: ಬಿಎಸ್ ಯಡಿಯೂರಪ್ಪ (BS Yediyurappa) ಚುನಾವಣಾ ರಾಜಕೀಯದಿಂದ ದೂರವಾಗುತ್ತಿರುವ ಬಗ್ಗೆ ಘೋಷಣೆ ಮಾಡಿದಾಗಲೇ ಪುತ್ರ ಬಿವೈ ವಿಜಯೇಂದ್ರ (BY Vijayendra) ತಮ್ಮ ಉತ್ತರಾಧಿಕಾರಿಯಾಗುವ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದ (Shikaripura) ಸ್ಪರ್ಧಿಸುವ ಸೂಚನೆ ನೀಡಿದ್ದರು. ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳು ವಿಜಯೇಂದ್ರಗೆ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಅಂತ ಕೇಳಿದಾಗ ಅವರು, ಶಿಕಾರಿಪುರದ ಪ್ರತಿ ಹಳ್ಳಿಗೆ ಭೇಟಿ ನೀಡಿ ಜನರೊಂದಿಗೆ ಮಾತಾಡುತ್ತಿರುವುದಾಗಿ ಹೇಳಿದರು. ಅವರು ಹೇಳುವ ತಾತ್ಪರ್ಯ ಸ್ಪಷ್ಟವಾಗಿತ್ತು. ಅವರಿಗೆ ಶಿಕಾರಿಪುರ ಬಿಟ್ಟು, ವರುಣಾವಾಲೀ ಅಥವಾ ಬೇರೆ ಯಾವುದೇ ಕ್ಷೇತ್ರದಿಂದಾಗಲೀ ಸ್ಪರ್ಧಿಸುವುದು ಬೇಕಿಲ್ಲ, ಆದರೂ ತೀರ್ಮಾನ ಹೈ ಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಅಂತ ಕೊನೆಯಲ್ಲಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.