Ballary Chalo: ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!

Updated on: Sep 01, 2026 | 1:19 PM

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ 'ಬಳ್ಳಾರಿ ಚಲೋ' ಪಾದಯಾತ್ರೆ ಆರಂಭವಾಗಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರೂ ವಾಲ್ಮೀಕಿ ನಿಗಮದ 187 ಕೋಟಿ ಹಗರಣದ ಹಣ ವಾಪಸ್ ತರುವುದು ಹಾಗೂ ಸರ್ಕಾರದ ರೈತ, ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಈ ಬೃಹತ್ ಹೋರಾಟ ಕೈಗೊಳ್ಳಲಾಗಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 01: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ, ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರೂ, ಬೇರೆ ಗಂಭೀರ ಕಾರಣಗಳಿವೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ನಾಗೇಂದ್ರ ರಾಜೀನಾಮೆಗಿಂತಲೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣ ಮತ್ತು ಆ ಹಣ ಮರಳಿ ಬರಬೇಕು ಎಂಬುದು ಪಾದಯಾತ್ರೆಯ ಪ್ರಧಾನ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿಸಿದ್ದ ಮೀಸಲಾತಿಯನ್ನು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿಲ್ಲ. ಅಲೆಮಾರಿ ಸಮುದಾಯಗಳಿಗೂ ಅನ್ಯಾಯ ಮಾಡಲಾಗಿದ್ದು, ಯುವಕರಿಗೆ ಉದ್ಯೋಗಾವಕಾಶಗಳಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ. ವಿಶೇಷವಾಗಿ, ಉತ್ತರ ಕರ್ನಾಟಕದಲ್ಲಿನ ಭೀಕರ ಬರಗಾಲವನ್ನು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಬರಪೀಡಿತ ತಾಲೂಕುಗಳ ಘೋಷಣೆಯಲ್ಲೂ ಮೀನಮೇಷ ಎಣಿಸುತ್ತಿದೆ. ರೈತ ವಿರೋಧಿ, ದಲಿತ ವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಬೀದಿಗಿಳಿದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us