ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿವೈ ವಿಜಯೇಂದ್ರ
ಇವತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ನೇರವಾಗಿ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡರ ಮನೆಗೆ ತೆರಳಿ ಹಿರಿಯ ನಾಯಕನಿಗೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ವಿಜಯೇಂದ್ರ ಮಾಜಿ ಪ್ರಧಾನ ಮಂತ್ರಿಯವರ ಮನೆಗೆ ಬಂದಾಗ ಹಾಸನ ಸಂಸದ ಮತ್ತು ಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅಲ್ಲೇ ಇದ್ದರು.
ಬೆಂಗಳೂರು: ಬಿಜೆಪಿ ರಾಜ್ಯ ಘಟಕ ಹೊಸ ಮತ್ತು ಯುವ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಮಯ ವ್ಯರ್ಥ ಮಾಡುವ ಆಸಾಮಿ ಅಲ್ಲ ಅಂತ ಕನ್ನಡಿಗರಿಗೆ ಅನಿಸುತ್ತಿದೆ. ಮಾತಿಗಿಂತ ಕೃತಿ ಲೇಸು ಅಂತ ಹೇಳ್ತಾರಲ್ಲ ಕನ್ನಡದಲ್ಲಿ, ಅದನ್ನು ಅವರು ದ್ಯೇಯವಾಕ್ಯ ಮಾಡಿಕೊಂಡಂತಿದೆ. ಇವತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ನೇರವಾಗಿ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡರ (HD Devegowda) ಮನೆಗೆ ತೆರಳಿ ಹಿರಿಯ ನಾಯಕನಿಗೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ವಿಜಯೇಂದ್ರ ಮಾಜಿ ಪ್ರಧಾನ ಮಂತ್ರಿಯವರ ಮನೆಗೆ ಬಂದಾಗ ಹಾಸನ ಸಂಸದ ಮತ್ತು ಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ (Prajwal Revanna) ಅಲ್ಲೇ ಇದ್ದರು. ದೇವೇಗೌಡರ ಪರವಾಗಿ ವಿಜಯೇಂದ್ರರನ್ನು ಪ್ರಜ್ವಲ್ ಸನ್ಮಾನಿಸುತ್ತಿರುವುದು ದೃಶ್ಯಗಳಲ್ಲಿ ನೋಡಬಹುದು. ವಿಜಯೇಂದ್ರಗೆ ಶಾಲು ಹೊದೆಸಿ, ಹಾರ ಹಾಕಿ ಅಭಿನಂದಿಸಲಾಯಿತು. ನಂತರ ಬಿಜೆಪಿ ನಾಯಕ ಸಹ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಿಗೆ ಬೋಕೆ ನೀಡಿ ಗೌರವಿಸುತ್ತಾರೆ. ಲೋಕ ಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ದೇವೇಗೌಡರನ್ನು ಭೇಟಿಯಾಗಿದ್ದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
