ಅಧಿಕಾರವಹಿಸಿಕೊಳ್ಳುವ ಮೊದಲು ತಂದೆಯ ಪಾದಗಳಿಗೆ ನಮಸ್ಕರಿಸಿದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ವಿಜಯೇಂದ್ರಗೆ ಕುರ್ಚಿ ತೆರವು ಮಾಡಿ ಅದರಲ್ಲಿ ಕುಳ್ಳಿರಿಸಿದ ಬಳಿಕ ಕಟೀಲ್, ಕೇಸರಿ ಶಾಲನ್ನು ಹೊದಿಸಿ, ಹಾರ ಹಾಕಿ ಒಂದು ಹೊತ್ತಿಗೆಯನ್ನು ನೀಡುತ್ತಾರೆ. ಪ್ರಾಯಶಃ ಅದು ಭಗವದ್ಗೀತೆಯ ಪ್ರತಿ ಇರಬಹುದು. ಅರ್ಚಕರು ವಿಜಯೇಂದ್ರ ಹಣಗೆ ತಿಲಕವಿಟ್ಟ ನಂತರ ಖುದ್ದು ಬಿಎಸ್ ಯಡಿಯೂರಪ್ಪ ನೂತನ ರಾಜ್ಯಾಧ್ಯಕ್ಷನಿಗೆ ಹೂವಿನ ಹಾರ ಹಾಕುತ್ತಾರೆ.

ಅಧಿಕಾರವಹಿಸಿಕೊಳ್ಳುವ ಮೊದಲು ತಂದೆಯ ಪಾದಗಳಿಗೆ ನಮಸ್ಕರಿಸಿದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
|

Updated on: Nov 15, 2023 | 12:01 PM

ಬೆಂಗಳೂರು: ಬಿವೈ ವಿಜಯೇಂದ್ರ (BY Vijayendra) ಈಗ ಅಧಿಕೃತವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ. ಹುದ್ದೆಯಿಂದ ನಿರ್ಗಮಿಸಿದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಂದ ಅಧಿಕಾರವಹಿಸಿಕೊಳ್ಳುವ ಮೊದಲು ಅವರು ತಮ್ಮ ತಂದೆ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಇತರ ಕೆಲ ಹಿರಿಯ ನಾಯಕರ ಪಾದಗಳಿಗೆ ನಮಸ್ಕರಿಸಿದರು. ಪಕ್ಷದ ಕಚೇರಿಯಲ್ಲಿರುವ ಅಧ್ಯಕ್ಷರ ಕೋಣೆಯಲ್ಲಿ ಕಟೀಲ್ ಅಧಿಕಾರ ಹಸ್ತಾಂತರಿಸುವುದನ್ನು ನೋಡಬಹುದು. ವಿಜಯೇಂದ್ರಗೆ ಕುರ್ಚಿ ತೆರವು ಮಾಡಿ ಅದರಲ್ಲಿ ಕುಳ್ಳಿರಿಸಿದ ಬಳಿಕ ಕಟೀಲ್, ಕೇಸರಿ ಶಾಲನ್ನು ಹೊದಿಸಿ, ಹಾರ ಹಾಕಿ ಒಂದು ಹೊತ್ತಿಗೆಯನ್ನು ನೀಡುತ್ತಾರೆ. ಪ್ರಾಯಶಃ ಅದು ಭಗವದ್ಗೀತೆಯ ಪ್ರತಿ ಇರಬಹುದು. ಅರ್ಚಕರು ವಿಜಯೇಂದ್ರ ಹಣಗೆ ತಿಲಕವಿಟ್ಟ ನಂತರ ಖುದ್ದು ಬಿಎಸ್ ಯಡಿಯೂರಪ್ಪ ನೂತನ ರಾಜ್ಯಾಧ್ಯಕ್ಷನಿಗೆ ಹೂವಿನ ಹಾರ ಹಾಕುತ್ತಾರೆ. ಆಗಲೂ ವಿಜಯೇಂದ್ರ ತಂದೆ ಕಾಲುಮುಟ್ಟಿ ನಮಸ್ಕರಿಸುತ್ತಾರೆ. ಮಾಜಿ ಸಚಿವರಾದ ಆರ್ ಅಶೋಕ, ಗೋವಿಂದ ಕಾರಜೋಳ, ಮುನಿರತ್ನ ನಾಯ್ಡು, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್