ಮೃತ ಚಂದ್ರಶೇಖರನ್ ಮನೆಗೆ ಭೇಟಿ ನೀಡಿ ಅವರ ಪತ್ನಿ ಮತ್ತು ಮಕ್ಕಳಿಗೆ ಸಾಂತ್ವನ ಹೇಳಿದ ಬಿವೈ ವಿಜಯೇಂದ್ರ

ಕವಿತಾ ತಮ್ಮ ಇಬ್ಬರು ಮಕ್ಳಳನ್ನು ಅವರಿಗೆ ಪರಿಚಯಿಸಿ; ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಮತ್ತು ಭ್ರಷ್ಟರಲ್ಲದ ತಮ್ಮ ಪತಿಯನ್ನು ಮೇಲಧಿಕಾರಿಗಳು ಬಲಿಪಶು ಮಾಡಿದ್ದಾರೆ ಎಂದು ಹೇಳಿದರು. ಕವಿತಾ ಮತ್ತು ಅವರ ಮಕ್ಕಳಿಗೆ ಸಮಾಧಾನ ಹೇಳಿದ ವಿಜಯೇಂದ್ರ, ಅವರು ಅಧೀರರಾಗುವ ಅವಶ್ಯಕತೆಯಿಲ್ಲ, ಬಿಜೆಪಿ ಅವರೊಂದಿಗಿದೆ ಅಂತ ಭರವಸೆ ನೀಡಿದರು.

ಮೃತ ಚಂದ್ರಶೇಖರನ್ ಮನೆಗೆ ಭೇಟಿ ನೀಡಿ ಅವರ ಪತ್ನಿ ಮತ್ತು ಮಕ್ಕಳಿಗೆ ಸಾಂತ್ವನ ಹೇಳಿದ ಬಿವೈ ವಿಜಯೇಂದ್ರ
|

Updated on: May 30, 2024 | 12:03 PM

ಶಿವಮೊಗ್ಗ: ಮಾನಸಿಕ ಒತ್ತಡ ತಾಳಲಾರದೆ ಕಳೆದ ವಾರ ಆತ್ಮಹತ್ಯೆಯ ಮೂಲಕ ಮರಣವನ್ನಪ್ಪಿದ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Board) ಮಂಡಳದಲ್ಲಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರನ್ (Chandrasekharan) ಅವರ ಮನೆಗೆ ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮತ್ತು ಸ್ಥಳೀಯ ಬಿಜೆಪಿ ಶಾಸಕ ಚನ್ನಬಸ್ಸಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಗರದ ಕೆಂಚಪ್ಪ ಲೇಔಟ್ ನಲ್ಲಿರುವ ಮೃತ ಚಂದ್ರಶೇಖರನ್ ಅವರ ನಿವಾಸಕ್ಕೆ ವಿಜಯೇಂದ್ರ ಕೆಲ ಸ್ಥಳೀಯ ಕಾರ್ಯಕರ್ತರೊಡನೆ ಆಗಮಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ವಿಜಯೇಂದ್ರ ಜೊತೆ ಮಹಿಳಾ ಕಾರ್ಯಕರ್ತೆಯರು ಕೂಡ ಇದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನ ಬಲಭಾಗದಲ್ಲಿ ಕೂರುವ ಚಂದ್ರಶೇಖರನ್ ಅವರ ಪತ್ನಿ ಕವಿತಾ ತಮ್ಮ ಇಬ್ಬರು ಮಕ್ಳಳನ್ನು ಅವರಿಗೆ ಪರಿಚಯಿಸಿ; ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಮತ್ತು ಭ್ರಷ್ಟರಲ್ಲದ ತಮ್ಮ ಪತಿಯನ್ನು ಮೇಲಧಿಕಾರಿಗಳು ಬಲಿಪಶು ಮಾಡಿದ್ದಾರೆ ಎಂದು ಹೇಳಿದರು. ಕವಿತಾ ಮತ್ತು ಅವರ ಮಕ್ಕಳಿಗೆ ಸಮಾಧಾನ ಹೇಳಿದ ವಿಜಯೇಂದ್ರ, ಅವರು ಅಧೀರರಾಗುವ ಅವಶ್ಯಕತೆಯಿಲ್ಲ, ಬಿಜೆಪಿ ಅವರೊಂದಿಗಿದೆ ಅಂತ ಭರವಸೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ ಹಣ ಗುಳಂ ಆರೋಪ, ಬ್ಯಾಂಕ್​ ಎಂಡಿ ಸೇರಿ ಹಲವರ ವಿರುದ್ಧ ಎಫ್​ಐಆರ್

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್