AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ

ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ

ಗಂಗಾಧರ​ ಬ. ಸಾಬೋಜಿ
|

Updated on: Sep 10, 2026 | 10:34 PM

Share

ಬಳ್ಳಾರಿಯಲ್ಲಿ ಬಿ ವೈ ವಿಜಯೇಂದ್ರ ನೇತೃತ್ವದ ಬಿಜೆಪಿಯ 10 ದಿನಗಳ ಪಾದಯಾತ್ರೆ ಸಮಾರೋಪಗೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತವನ್ನು ಶೂನ್ಯ ಎಂದು ಟೀಕಿಸಿದ ಬಿಜೆಪಿ ನಾಯಕರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಕೇವಲ ಹೋರಾಟದ ಮೊದಲ ಹಂತದ ಅಂತ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮುಂದುವರಿಸುವುದಾಗಿ ಕೇಸರಿ ಪಡೆ ಘೋಷಿಸಿದೆ.

ಬಳ್ಳಾರಿ, ಸೆಪ್ಟೆಂಬರ್​ 10: ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರ 100 ದಿನಗಳ ಪೂರೈಸಿದ ಸಂಭ್ರಮದಲ್ಲಿದ್ದರೇ, ಅತ್ತ ಬಳ್ಳಾರಿಯಲ್ಲಿ ಬಿಜೆಪಿಯ 10 ದಿನಗಳ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಯಿತು. ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸೂಗೂರುನಿಂದ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿದ್ದ ಬಿಜೆಪಿಯ 10 ದಿನಗಳ ಬೃಹತ್ ಪಾದಯಾತ್ರೆಯು ಬಳ್ಳಾರಿಯ ಹಳೆ ಮುನ್ಸಿಪಲ್ ಮೈದಾನದಲ್ಲಿ ಸಮಾರೋಪಗೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ 100 ದಿನಗಳ ಆಡಳಿತವನ್ನು ಶೂನ್ಯ ಎಂದು ಬಿಜೆಪಿ ನಾಯಕರು ಟೀಕಿಸಿದರು. ಬಿಜೆಪಿ ರಾಜಕೀಯ ಗಿಮಿಕ್‌ಗಾಗಿ ಪಾದಯಾತ್ರೆ ನಡೆಸುತ್ತಿದೆ, ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಇದು ಹೋರಾಟದ ಅಂತ್ಯವಲ್ಲ, ಬದಲಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಮುಂಬರುವ ಹೋರಾಟದ ಆರಂಭ ಎಂದು ಬಿಜೆಪಿ ಘೋಷಿಸಿದ್ದು, ತಮ್ಮ ನಿರಂತರ ಹೋರಾಟವನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದೆ.

ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us