ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಬದಲಾಯಿಸಲು ಸಂಪುಟ ಅನುಮೋದನೆ: ಹೆಚ್ ಕೆ ಪಾಟೀಲ್

Updated on: Jul 26, 2024 | 5:49 PM

ಬ್ರ್ಯಾಂಡ್ ಬೆಂಗಳೂರು ಬಿಲ್ಡ್ ಮಾಡುವ ಭರದಲ್ಲಿ ತುಮಕೂರು ಜಿಲ್ಲೆಯನ್ನೂ ಬೆಂಗಳೂರಿಗೆ ಸೇರಿಸಲಾಗುತ್ತಾ ಅಂತ ಕೇಳಿದ ಪ್ರಶ್ನೆಗೆ ಸಚಿವ ಪಾಟೀಲ್, ಇಲ್ಲ ಸೇರಿಸಲ್ಲ ಯಾಕೆಂದರೆ, ತುಮಕೂರು ಯಾವತ್ತೂ ಬೆಂಗಳೂರಿನ ಭಾಗವಾಗಿರಲಿಲ್ಲ ಅದರೆ ರಾಮನಗರ ಜಿಲ್ಲೆ ಮೊದಲಿಂದಲೂ ಬೆಂಗಳೂರಿನ ಭಾಗವಾಗಿತ್ತು ಎಂದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಮತ್ತು ಕನಕಪುರದ ಶಾಸಕ ಡಿಕೆ ಶಿವಕುಮಾರ್ ತಾವಂದುಕೊಂಡಿದ್ದನ್ನು ಸಾಧಿಸಿದ್ದಾರೆ. ಕೆಲ ದಿನಗಳ ಹಿಂದೆ ಅವರು ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪುನರ್ ನಾಮಕರಣ ಮಾಡುವ ಬಗ್ಗೆ ಚಿಂತನೆ ನಡೆದಿದೆ ಮತ್ತು ಅದರ ಬಗ್ಗೆ ಒಂದು ಪ್ರಸ್ತಾವ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದೇವೆ ಎಂದು ಹೇಳಿದ್ದರು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್ ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಬದಲಾಯಿಸಲಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ಎಲ್ಲವೂ ಮೊದಲಿನಂತೆಯೇ ಇರುತ್ತದೆ ಹೆಸರು ಮಾತ್ರ ಬದಲಾಯಿಸಲಾಗುವುದು ಎಂದು ಪಾಟೀಲ್ ಹೇಳಿದರು. ಹೆಸರು ಬದಲಾವಣೆಯಿಂದ ಅಗುವ ಸಾಧನೆಯಾದರೂ ಏನು ಅಂತ ಕೇಳಿದಾಗ, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಜಿಲ್ಲೆಯ ಜನರ ಆಶಯವೂ ಆಗಿತ್ತು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾವಣೆ ಸೇರಿದಂತೆ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More