AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಸಮಕ್ಷಮದಲ್ಲಿರುವ ಅರ್ಜಿಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ನಿರ್ಧಾರ

ತಮ್ಮ ಸಮಕ್ಷಮದಲ್ಲಿರುವ ಅರ್ಜಿಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ನಿರ್ಧಾರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 22, 2024 | 6:20 PM

Share

ನಿನ್ನೆ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ್ದ ಕುಮಾರಸ್ವಾಮಿಯವರು, ತಮ್ಮ ವಿರುದ್ಧ ಲೋಕಾಯುಕ್ತ ಎಸ್​ಐಟಿ ಸಲ್ಲಿಸಿದ ವರದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಉಲ್ಲೇಖವಾಗಿರುವುದನ್ನು ಅಂಗೀಕರಿಸಿದ್ದರು. ಈಗ ಉದ್ಭವಿಸುವ ಪ್ರಶ್ನೆಯೇನೆಂದರೆ ರಾಜ್ಯಪಾಲರು ಕುಮಾರಸ್ವಾಮಿ ಮತ್ತು ಉಳಿದ ಮೂವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರೆಯೇ ಅನ್ನೋದು.

ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಪತ್ರಿಕಾ ಗೋಷ್ಠಿಯಲ್ಲಿ ವಿವರಸಿದರು. ಪ್ರಾಸಿಕ್ಯೂಷನ್ ಅನುಮೋದನೆ ಕೋರಿ ರಾಜ್ಯಪಾಲರ ಸಮಕ್ಷಮದಲ್ಲಿರುವ 4 ಮನವಿಗಳ ಬಗ್ಗೆ ಶೀಘ್ರವಾಗಿ ತೀರ್ಮಾನ ತೆಗೆದುಕೊಂಡು ನ್ಯಾಯಾಂಗ ಪ್ರಕ್ರಿಯೆ ಸುಗಮಗೊಳಿಸಲು ಸಂಪುಟವು ರಾಜ್ಯಪಾಲರ ನೆರವು ಕೋರುತ್ತ ಸಲಹೆ ನೀಡಿಲು ಸಂಪುಟ ತೀರ್ಮಾನಿಸಿದೆ ಎಂದು ಪಾಟೀಲ್ ಹೇಳಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ಪೂರ್ವಾನುಮತಿ ಕೋರಿ ದಿನಾಂಕ 09-10-2021 ರಂದು ಅರ್ಜಿ ಸಲ್ಲಿಸಲಾಗಿದೆ. ಮತ್ತೊಬ್ಬ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ದಿನಾಂಕ 26-02-2024 ರಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಪಾಟೀಲ್ ಹೇಳಿದರು, ಹಾಗೆಯೇ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ದೋಷಾರೋಪಣೆ ಪಟ್ಟಿಯನ್ನು ದಿನಾಂಕ 21-11-2023 ರಂದು ಸಲ್ಲಿಸಲಾಗಿದೆ.

ಇದಕ್ಕೆ ಪ್ರತಿಯಾಗಿ ಮಾನ್ಯ ರಾಜ್ಯಪಾಲರು 29-07-2024 ರಂದು ಸ್ಪಷ್ಟೀಕರಣ ಕೇಳಿರುತ್ತಾರೆ. ನಂತರ ದಿನಾಂಕ 16-08-2024 ರಂದು ಲೋಕಾಯುಕ್ತ ಎಸ್ಐಟಿ ಅಗತ್ಯವಿರುವ ಸ್ಪಷ್ಟೀಕರಣವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ಹಾಗೆಯೇ ಮಾಜಿ ಸಚಿವ ಮತ್ತು ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಪ್ರಕರಣದಲ್ಲಿ 13-05-2024 ರಂದು ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗಣಿಗಾರಿಕೆ ಪ್ರಕರಣ: ಸಹಿ ಫೋರ್ಜರಿ ಮಾಡಲಾಗಿತ್ತೆಂದ ಹೆಚ್​ಡಿ ಕುಮಾರಸ್ವಾಮಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.