ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಪತ್ರಿಕಾ ಗೋಷ್ಠಿಯಲ್ಲಿ ವಿವರಸಿದರು. ಪ್ರಾಸಿಕ್ಯೂಷನ್ ಅನುಮೋದನೆ ಕೋರಿ ರಾಜ್ಯಪಾಲರ ಸಮಕ್ಷಮದಲ್ಲಿರುವ 4 ಮನವಿಗಳ ಬಗ್ಗೆ ಶೀಘ್ರವಾಗಿ ತೀರ್ಮಾನ ತೆಗೆದುಕೊಂಡು ನ್ಯಾಯಾಂಗ ಪ್ರಕ್ರಿಯೆ ಸುಗಮಗೊಳಿಸಲು ಸಂಪುಟವು ರಾಜ್ಯಪಾಲರ ನೆರವು ಕೋರುತ್ತ ಸಲಹೆ ನೀಡಿಲು ಸಂಪುಟ ತೀರ್ಮಾನಿಸಿದೆ ಎಂದು ಪಾಟೀಲ್ ಹೇಳಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ಪೂರ್ವಾನುಮತಿ ಕೋರಿ ದಿನಾಂಕ 09-10-2021 ರಂದು ಅರ್ಜಿ ಸಲ್ಲಿಸಲಾಗಿದೆ. ಮತ್ತೊಬ್ಬ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ದಿನಾಂಕ 26-02-2024 ರಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಪಾಟೀಲ್ ಹೇಳಿದರು, ಹಾಗೆಯೇ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ದೋಷಾರೋಪಣೆ ಪಟ್ಟಿಯನ್ನು ದಿನಾಂಕ 21-11-2023 ರಂದು ಸಲ್ಲಿಸಲಾಗಿದೆ.
ಇದಕ್ಕೆ ಪ್ರತಿಯಾಗಿ ಮಾನ್ಯ ರಾಜ್ಯಪಾಲರು 29-07-2024 ರಂದು ಸ್ಪಷ್ಟೀಕರಣ ಕೇಳಿರುತ್ತಾರೆ. ನಂತರ ದಿನಾಂಕ 16-08-2024 ರಂದು ಲೋಕಾಯುಕ್ತ ಎಸ್ಐಟಿ ಅಗತ್ಯವಿರುವ ಸ್ಪಷ್ಟೀಕರಣವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ಹಾಗೆಯೇ ಮಾಜಿ ಸಚಿವ ಮತ್ತು ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಪ್ರಕರಣದಲ್ಲಿ 13-05-2024 ರಂದು ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಾಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಗಣಿಗಾರಿಕೆ ಪ್ರಕರಣ: ಸಹಿ ಫೋರ್ಜರಿ ಮಾಡಲಾಗಿತ್ತೆಂದ ಹೆಚ್ಡಿ ಕುಮಾರಸ್ವಾಮಿ