ಮುಡಾ ಪ್ರಕರಣ ಬೆಳಕಿಗೆ ಬಂದ ನಂತರ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಹೆಚ್ಚಿದ ಕಾಮರಾಡರೀ!

Updated on: Aug 21, 2024 | 6:08 PM

ಆಲಮಟ್ಟಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ, ಸಚಿವರಾದ ಎಂಬಿ ಪಾಟೀಲ್, ಆರ್ ಬಿ ತಿಮ್ಮಾಪುರ, ಶಿವಾನಂದ ಪಾಟೀಲ್ ಮತ್ತು ವಿಜಯಪುರ ಮತ್ತು ಬಾಗಲಕೋಟೆ ಭಾಗದ ಶಾಸಕರು ಮತ್ತು ಎಂಎಲ್​ಸಿಗಳು ಹಾಜರಿದ್ದರು.

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಿಡಗುಂದಿ ಬಳಿಯಿರುವ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದರು. ಯಾರೇನೇ ಹೇಳಲಿ ಮುಡಾ ಪ್ರಕರಣ ಬೆಳಕಿಗೆ ಬಂದ ಬೆಳಕಿಗೆ ಬಂದ ಬಳಿಕ ಅದರಲ್ಲೂ ವಿಶೇಷವಾಗಿ ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟೀಸ್ ಜಾರಿಮಾಡಿದ ಬಳಿಕ ಸಿಎಂ ಮತ್ತು ಅವರ ಡೆಪ್ಯುಟಿ ಶಿವಕುಮಾರ್ ನಡುವಿನ ಸ್ನೇಹ, ಹೊಂದಾಣಿಕೆ, ಕಾಮರಾಡರೀ ಮತ್ತಷ್ಟು ಹೆಚ್ಚಿದೆ. ಮುಡಾ ಹಗರಣದಲ್ಲಿ ಶಿವಕುಮಾರ್ ಮುಖ್ಯಮಂತ್ರಿಯವರ ಹಿಂದೆ ನಿಜಕ್ಕೂ ಬಂಡೆಯ ಹಾಗೆ ನಿಂತಿದ್ದಾರೆ. ಸ್ವಲ್ಪಹೊತ್ತಿಗೆ ಮುಂಚೆ ಕೊಪ್ಪಳದಲ್ಲಿ ಸಿದ್ದರಾಮಯ್ಯನವರಿಗೆ ಮಾಧ್ಯಮದವರು ಪ್ರಶ್ನೆಯೊಂದನ್ನು ಕೇಳಿದಾಗ, ಶಿವಕುಮಾರ್ ತಾವೇ ಮುಂದಾಗಿ ಉತ್ತರ ನೀಡಿದರು. ಇಲ್ಲಿ ಆಲಮಟ್ಟಿ ಸುದ್ದಿಗೋಷ್ಠಿಯಲ್ಲಿ ಎಲ್ಲರೂ ಕುರ್ಚಿಗಳಲ್ಲಿ ಆಸೀನರಾದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಧ್ಯಮದವರಿಗೆ ಸ್ನೇಹಿತರೇ ಮೊದಲಿಗೆ ನೀರಾವರಿ ಸಚಿವ ಶಿವಕುಮಾರ್ ಅವರು ಮಾತಾಡುತ್ತಾರೆ ಅಮೇಲೆ ನಾನು ಮಾತಅಡುತ್ತೇನೆ ಎಂದು ಹೇಳುತ್ತ ಮೈಕ್ ಇಸಿದುಕೊಂಡು ಅವರ ಕೈಗೆ ನೀಡುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಮಾರಸ್ವಾಮಿ ಅರೆಸ್ಟ್​​ಗೆ​ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು: ಸಿಎಂ ತಿರುಗೇಟು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More