ಭಿನ್ನಾಭಿಪ್ರಾಯಗಳಿರಬಹುದು ಆದರೆ ಪಕ್ಷದ ಎಲ್ಲ ನಾಯಕರ ನಡುವೆ ಸಾಮರಸ್ಯವಿದೆ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 21, 2023 | 2:09 PM

ಬೆಳಗಾವಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದವರೇ ಮುಂದುವರಿದಿದ್ದಾರೆ, ಸರ್ಕಾರ ಮತ್ತು ಜನರ ಪರ ಕೆಲಸ ಮಾಡುವ ಅಧಿಕಾರಿಗಳಿದ್ದರೆ ಸಾಕು ಎಂದರು. ಎಲ್ಲ ವಿಷಯಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಥಳುಕು ಹಾಕಬೇಡಿ, ಅವರ ಮತ್ತು ತಮ್ಮ ನಡುವೆಯೂ ಯಾವುದೇ ಮನಸ್ತಾಪವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ: ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಬಹಳ ಎಚ್ಚರಿಕೆಯಿಂದ ಯಾರಿಗೂ ನೋವಾಗದ ಹಾಗೆ ಮಾತಾಡುತ್ತಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಪತ್ರಿಕಾಗೋಷ್ಟಿ ನಡೆಸಿ ಮಾತಾಡಿದ ಅವರು ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯಗಳಿದ್ದಾಗ್ಯೂ ಪಕ್ಷದ ಸಮಗ್ರತೆ ವಿಷಯ ಬಂದಾಗ ಮತ್ತು ಚುನಾವಣೆ ಸಮಯದಲ್ಲಿ ಎಲ್ಲರೂ ಒಂದಾಗುತ್ತೇವೆ ಅಂತ ಹೇಳಿದರು. ಅಪರೋಕ್ಷವಾಗಿ ಅವರು ಡಿಕೆ ಶಿವಕುಮಾರ್ (DK Shivakumar) ಜೊತೆ ಮುನಿಸಿರುವುದನ್ನು ಅಂಗೀಕರಿಸಿದರಾದರೂ ಅದೇನು ಗಂಭೀರ ವಿಷಯವೇ ಅನ್ನುವ ದೋರಣೆ ಪ್ರದರ್ಶಿಸಿದರು. ಅಧಿಕಾರಿಗಳ ವರ್ಗಾವಣೆ ವಿಷಯ ಅಪ್ರಸ್ತುತ ಎನ್ನುವ ಧಾಟಿಯಲ್ಲಿ ಮಾತಾಡಿದ ಸತೀಶ್, ತಾವ್ಯಾವತ್ತೂ ತಮ್ಮ ಆಯ್ಕೆಯ ಅಧಿಕಾರಿಗಳು ಬೇಕೆಂದು ಕೇಳಿಲ್ಲ, ಬೆಳಗಾವಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದವರೇ ಮುಂದುವರಿದಿದ್ದಾರೆ, ಸರ್ಕಾರ ಮತ್ತು ಜನರ ಪರ ಕೆಲಸ ಮಾಡುವ ಅಧಿಕಾರಿಗಳಿದ್ದರೆ ಸಾಕು ಎಂದರು. ಎಲ್ಲ ವಿಷಯಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಥಳುಕು ಹಾಕಬೇಡಿ, ಅವರ ಮತ್ತು ತಮ್ಮ ನಡುವೆಯೂ ಯಾವುದೇ ಮನಸ್ತಾಪವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.