Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಪರಿಹಾರ ನಿಧಿಗಾಗಿ ಕೇಂದ್ರವನ್ನು ಒತ್ತಾಯಿಸದ ಬಿಜೆಪಿ ನಾಯಕರಿಗೆ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ: ಜಿ ಪರಮೇಶ್ವರ್

ಬರಪರಿಹಾರ ನಿಧಿಗಾಗಿ ಕೇಂದ್ರವನ್ನು ಒತ್ತಾಯಿಸದ ಬಿಜೆಪಿ ನಾಯಕರಿಗೆ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 03, 2024 | 12:51 PM

ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ತಲಾ ರೂ. 2,000 ಯಂತೆ ರೈತರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ಹಣ ವರ್ಗಾಯಿಸಲಾಗಿದೆ. ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳ ಏರ್ಪಾಟಿಗೆ ರೂ. 545 ಕೋಟಿ ಹಣವನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿದೆ. ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಬಿಜೆಪಿ ನಾಯಕರಲ್ಲಿ ಅದ್ಯಾವ ನೈತಿಕತೆ ಉಳಿದಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಾರೆ ಅಂತ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿದರು. ಬರ ಪರಿಹಾರ ಧನವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (Law and Order) ಕುಸಿದು ಹೋಗಿದೆ ಅಂತ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸುವುದಾಗಿ ಹೇಳಿದ್ದಾರೆ ಅಂತ ಮಾಧ್ಯಮ ಪ್ರತಿನಿಧಿಗಳು ತಿಳಿಸಿದಾಗ ಪರಮೇಶ್ವರ್ ಹಾಗೆ ಪ್ರತಿಕ್ರಿಯಿಸಿದರು. ಬರ ಪರಿಹಾರ ಪರಿಹಾರ ನಿಧಿ (drought relief fund) ಕೇಂದ್ರದಿಂದ ಇದುವರೆಗೆ ಬಿಡುಗಡೆಯಾಗಿಲ್ಲ, ರಾಜ್ಯದ 27 ಸಂಸತ್ ಸದಸ್ಯರು ಪ್ರಧಾನಿಯವರಿಗಾಗಲೀ, ಗೃಹ ಸಚಿವರಿಗಾಗಲೀ ಯಾಕೆ ಮನವಿ ಮಾಡುತ್ತಿಲ್ಲ? ಎಂದು ಪರಮೇಶ್ವರ್ ಕೇಳಿದರು.

ನ್ಯಾಯಸಮ್ಮತವಾಗಿ ರಾಜ್ಯಕ್ಕೆ ಸಲ್ಲಬೇಕಾದ ಬರಪರಿಹಾರ ನಿಧಿ ಬಿಡುಗಡೆ ಮಾಡಲಿ ಅಂತ ಕೇಳಲಿ. ಅದನ್ನು ಮಾಡೋದು ಬಿಟ್ಟು ಇಲ್ಲಿ ಪ್ರತಿಭಟನೆ ನಡೆಸಿದರೆ ಅದಕ್ಕೇನು ಅರ್ಥ? ಎಂದು ಗೃಹ ಸಚಿವ ಅಸಹನೆಯಿಂದ ಕೇಳಿದರು. ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ತಲಾ ರೂ. 2,000 ಯಂತೆ ರೈತರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ಹಣ ವರ್ಗಾಯಿಸಲಾಗಿದೆ. ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳ ಏರ್ಪಾಟಿಗೆ ರೂ. 545 ಕೋಟಿ ಹಣವನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿದೆ. ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ