Karnataka Budget Session: ಬ್ರಿಟಿಷರು ವಾಸವಾಗಿದ್ದ ದಂಡು ಪ್ರದೇಶದಲ್ಲಿ ಐಟಿ-ಬಿಟಿ ಉದ್ದಿಮೆ, ಶಾಲಾ-ಕಾಲೇಜು ಅಸ್ತಿತ್ವಕ್ಕೆ ಬಂದಿವೆ: ಮುನಿರತ್ನ

ಅರುಣ್​ ಕುಮಾರ್​ ಬೆಳ್ಳಿ

Updated on: Mar 10, 2025 | 7:26 PM

ಗ್ರೇಟರ್ ಬೆಂಗಳೂರು ಯೋಜನೆಯ ಭಾಗವಾಗಿರುವ ಟನೆಲ್ ರೋಡ್ ಮತ್ತು ಎಲಿವೇಟೆಡ್ ಕಾರಿಡಾರ್ ಬಗ್ಗೆ ಮಾತಾಡಿದ ಮುನಿರತ್ನ ಅವುಗಳ ನಿರ್ಮಾಣಕ್ಕೆ ತಗಲುವ ವೆಚ್ಚ ಮತ್ತು ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಸರ್ಕಾರ ಮಾಡಿಕೊಂಡಿರುವ ತಯಾರಿಯನ್ನು ಗೇಲಿ ಮಾಡಿದರು. ಏತನ್ಮಧ್ಯೆ, ಸಚಿವ ರಾಮಲಿಂಗಾರೆಡ್ಡಿ, ಈಜಿಪುರ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ನಿಂತು ಹೋಗಿತ್ತು, ಈಗ ಪುನಃ ಅರಂಭಿಸಲಾಗಿದೆ ಎಂದರು.

ಬೆಂಗಳೂರು, ಮಾರ್ಚ್ 10: ವಿಧಾನಸಭಾ ಅಧಿವೇಶನದಲ್ಲಿ (Assembly session) ಇಂದು ಗ್ರೇಟರ್ ಬೆಂಗಳೂರು ಬಿಲ್ ಬಗ್ಗೆ ಮಾತಾಡಿದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು, ಬ್ರಿಟಿಷರ ಕಾಲದಲ್ಲಿ ಬೆಂಗಳೂರು-ದಂಡು ಪ್ರದೇಶ ಮತ್ತು ನಗರ ಎರಡು ಭಾಗಗಳಲ್ಲಿ ಗುರುತಿಸಿಕೊಳ್ಳುತಿತ್ತು, ದಂಡು ಪ್ರದೇಶದಲ್ಲಿ ಬ್ರಿಟಿಷರು ವಾಸವಾಗಿದ್ದರೆ ಪಶ್ಚಿಮ ಭಾಗದಲ್ಲಿ (ನಗರ) ಕೂಲಿ ಕಾರ್ಮಿಕರು ವಾಸವಾಗಿದ್ದರು. ದಂಡು ಪ್ರದೇಶದಲ್ಲಿ ಐಟಿ-ಬಿಟಿಗಳ ಉಗಮವಾದರೆ ಪಶ್ಚಿಮ ಭಾಗದಲ್ಲಿ ಕೂಲಿ ಕಾರ್ಮಿಕರಿಗೆ ಬಿನ್ನಿ ಮಿಲ್, ರಾಜಾ ಮಿಲ್, ಕಿರ್ಲೋಸ್ಕರ್ ಮೊದಲದ ಕಂಪನಿಗಳು ಅಸ್ತಿತ್ವಕ್ಕೆ ಬಂದವು, ಹಾಗಾಗೇ, ನಗರ ಪ್ರದೇಶ ಈಗಲೂ ಬಡತನದಿಂದ ಕೂಡಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Karnataka Budget Session: ವ್ಹೀಲ್ ಚೇರಲ್ಲೇ ವಿಧಾನಸಭೆಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರಿಂದ ಸ್ವಾಗತ     

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.