Karnataka Assembly Polls: ಪೊಲೀಸರು ಸೀಜ್ ಮಾಡಿರುವ ಸೀರೆ, ಮೊಬೈಲ್ ಫೋನ್ ಗಳಿದ್ದ ಕಾರು ಜಯನಗರದ ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿಗೆ ಸೇರಿದ್ದು!

ಅರುಣ್​ ಕುಮಾರ್​ ಬೆಳ್ಳಿ

Updated on: Apr 06, 2023 | 6:36 PM

ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಚುನಾವಣಾ ಆಯೋಗ ತಿಲಕ್ ಮಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಬೆಂಗಳೂರು: ನಗರದ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಚೆಕ್ ಪೋಸ್ಟ್ ಒಂದರ ಬಳಿ ಪೊಲೀಸರು ಮತ್ತು ಫ್ಲೈಯಿಂಗ್ ಸ್ಕ್ವ್ಯಾಡ್ ಜಪ್ತಿ ಮಾಡಿದ ಕಾರು ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ (Sowmya Reddy) ಅವರಿಗೆ ಸೇರಿದ್ದೆಂಬ ವಿಷಯ ಬಹಿರಂಗಗೊಂಡಿದೆ. ಸೀಜ್ ಮಾಡಿದ ಕಾರಲ್ಲಿ 23 ಸೀರೆ, 16 ಶಾಲು ಮತ್ತು ಹಲವಿ ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. ಈ ವಸ್ತುಗಳನ್ನೆಲ್ಲ ಮತದಾರರಿಗೆ (voters) ಹಂಚಲು ತೆಗೆದುಕೊಂಡು ಹೋಗಲಾಗುತ್ತಿತ್ತೇ ಎಂಬ ಸಂಗತಿ ಇನ್ನೂ ದೃಢಪಡಬೇಕಿದೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಚುನಾವಣಾ ಆಯೋಗ ತಿಲಕ್ ಮಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Apr 06, 2023 06:32 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.