ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ಬೀಳುತ್ತೆ ಕೇಸ್: ಡಿಕೆ ಶಿವಕುಮಾರ್ ಖಡಕ್ ಸೂಚನೆ
ಡಿಸಿಎಂ ಡಿಕೆ ಶಿವಕುಮಾರ್ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಎಲ್ಲೆಂದರಲ್ಲಿ ಕಸ ಹಾಕುವವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದರು. ಟ್ರಾಫಿಕ್ ಕ್ಯಾಮೆರಾಗಳ ಮೂಲಕ ಕಸ ಹಾಕುವವರನ್ನು ಗುರುತಿಸಲಾಗುವುದು. ಗುಂಡಿ ಮುಚ್ಚುವ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಏರ್ಪೋರ್ಟ್ ಬಳಿ ಥೀಮ್ ಪಾರ್ಕ್ ಮುಂದುವರಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು, ಅಕ್ಟೋಬರ್ 04: ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ಕೇಸ್ ಹಾಕುವಂತೆ ಸೂಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ದಸರಾ ಹಬ್ಬದಲ್ಲಿ ವಿಪರೀತ ಕಸ ಬಂದಿದೆ. ಎಲ್ಲೆಲ್ಲಿ ಕಸ ಹೆಚ್ಚುತ್ತಿದೆ ಅಲ್ಲಿ ಟ್ರಾಫಿಕ್ ಪೊಲೀಸ್ ಕ್ಯಾಮರಾದಲ್ಲಿ ಮಾನಿಟರ್ ಮಾಡಲಿದ್ದೇವೆ. ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ಕೇಸ್ ಹಾಕುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
