ಲಿಂಗಾಯತರ ಮಧ್ಯೆ ಜಾತಿ ಜಟಾಪಟಿ ತಂದ ಜಾತಿ ಗಣತಿ: ಪಂಚಮಸಾಲಿಗಳ ಮನೆಗೆ ಸ್ಟಿಕ್ಕರ್ ಅಭಿಯಾನ ಆರಂಭಿಸಿದ ವಚನಾನಂದ ಶ್ರೀ

Updated on: Sep 20, 2025 | 2:56 PM

ರಾಜ್ಯದಲ್ಲಿ ಜಾತಿ ಗಣತಿ ಗೊಂದಲ ಜೋರಾಗಿದೆ. ಅದರಲ್ಲೂ ವೀರಶೈವ ಲಿಂಗಾಯತ ಮತ್ತು ಒಳಪಂಗಡಗಳಲ್ಲಿ ಇದು ತೀರ್ವ ಸ್ವರೂಪ ಪಡೆದಿವೆ. ಕೆಲವರು ಪ್ರತ್ಯೇಕ ಲಿಂಗಾಯತ ಧರ್ಮ ಅಂತ ಹೇಳ್ತಿದ್ದರೆ, ಕೆಲವರು ಹಿಂದೂ ಧರ್ಮ ಅಂತ ಬರೆಸಬೇಕು ಅಂತ ಹೇಳ್ತಿದ್ದಾರೆ. ಈ ಮಧ್ಯೆ, ಜಾತಿ ಗಣತಿ ವೇಳೆ ಹಿಂದೂ ಧರ್ಮ ಎಂದೇ ನಮೂದಿಸಲು ಸೂಚನೆ ನೀಡಲಾಗಿದೆ. ಆದರೆ, ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಹಾಗೂ ಪಂಚಮಸಾಲಿ ಲಿಂಗಾಯತ ಎಂದು ಬರೆಸುವ ಕುರಿತಾದ ಜಟಾಪಟಿ ಮುಂದುವರಿದಿದೆ.

ಹುಬ್ಬಳ್ಳಿ, ಸೆಪ್ಟೆಂಬರ್ 20: ಕೊನೆಗೂ ಜಾತಿ ಗಣತಿ ವೇಳೆ ಹಿಂದೂ ಧರ್ಮ ಎಂದು ಬರೆಸುವ ವಿಚಾರದಲ್ಲಿ ಲಿಂಗಾಯತರು ಒಮ್ಮತಕ್ಕೆ ಬಂದರೂ ಜಾತಿ ಜಟಾಪಟಿ ಜೋರಾಗಿದೆ. ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕೆಂಬುದು ಒಂದು ಬಣದ ಆಗ್ರಹವಾದರೆ, ಪಂಚಮಸಾಲಿ ಲಿಂಗಾಯತ ಎಂದು ಬರೆಯಬೇಕೆಂದು ಇನ್ನು ಕೆಲವರು ಆಗ್ರಹಿಸಿದ್ದಾರೆ. ಲಿಂಗಾಯತ ಪಂಚಮಸಾಲಿ ಎಂದು ಜಾತಿ ಕಾಲಂನಲ್ಲಿ ನಮೂದಿಸುವಂತೆ ವಚನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಮನೆ ಮನೆ ಸ್ಟಿಕ್ಕರ್ ಅಭಿಯಾನ ಆರಂಭಿಸಲಾಗಿದೆ. ಸುಮಾರು 1 ಲಕ್ಷ ಸ್ಟಿಕ್ಕರ್ ಅಂಟಿಸುವ ಗುರಿ ಹೊಂದಲಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ವಚನಾನಂದ ಶ್ರೀ ತಿಳಿಸಿದ್ದಾರೆ.

 

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More