AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು: ಮಹತ್ವದ ವಿಡಿಯೋ ರಿಲೀಸ್​​ ಮಾಡಿದ ಕಾಂಗ್ರೆಸ್​​ ಶಾಸಕ

ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು: ಮಹತ್ವದ ವಿಡಿಯೋ ರಿಲೀಸ್​​ ಮಾಡಿದ ಕಾಂಗ್ರೆಸ್​​ ಶಾಸಕ

ದಿಲೀಪ್​, ಚೌಡಹಳ್ಳಿ
| Edited By: |

Updated on:Jul 28, 2026 | 4:54 PM

Share

Cauvery Row:ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವ ಬೆನ್ನಲ್ಲೇ, ತಮಿಳುನಾಡಿನ ಚಿದಂಬರಂ ಬಳಿ ಕಾವೇರಿ ನದಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಸ್ಫೋಟಕ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ, ಜುಲೈ 28: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ CWRC ಆದೇಶದ ನಡುವೆ ಮಂಡ್ಯ ಶಾಸಕ ಗಣಿಗ ರವಿಕುಮಾರ್​​ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನ ಚಿದಂಬರಂನಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಕಾವೇರಿ ನೀರು ಹರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮಿಳುನಾಡಿಗೆ ಹೋಗಿದ್ದಾಗ ಗಣಿಗ ರವಿ ಈ ವಿಡಿಯೋ ಮಾಡಿದ್ದರು ಎನ್ನಲಾಗಿದ್ದು, ಮೇಕೆದಾಟು ಯೋಜನೆಗೆ ಸುಮ್ಮನೆ‌ ಕ್ಯಾತೆ ತೆಗೆಯುತ್ತಿದ್ದಾರೆ. ನಾವು ಮೇಕೆದಾಟು ಅಣೆಕಟ್ಟೆ‌ ಕಟ್ಟುತ್ತೇವೆ. ಮೆಟ್ಟೂರಿನ ಜಲಾಶಯದ ನಂತರ ನೀವು ಅಣೆಕಟ್ಟು ಕಟ್ಟಿ ವ್ಯರ್ಥವಾಗಿ ಸಮುದ್ರಕ್ಕೆ ಹರಿಯುವ ನೀರನ್ನ ಉಳಿಸಬಹುದು ಎಂದು ಶಾಸಕರು ಆಡಿರುವ ಮಾತುಗಳು ವಿಡಿಯೋದಲ್ಲಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 28, 2026 04:52 PM

Follow Us