ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’ ಪ್ರದರ್ಶನ
ಬೆಂಗಳೂರಿನ ಪ್ರಸಿದ್ಧ ‘ಊರ್ವಶಿ’ ಚಿತ್ರಮಂದಿರದಲ್ಲಿ ತಮಿಳಿನ ‘ಜನ ನಾಯಗನ್’ ಬದಲಿಗೆ ಕನ್ನಡದ ‘ಕರಾವಳಿ’ ಸಿನಿಮಾವನ್ನು ಪ್ರದರ್ಶಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ಈ ಥಿಯೇಟರ್ನಲ್ಲಿ ‘ಜನ ನಾಯಗನ್’ ಪ್ರದರ್ಶನ ಕಾಣುತ್ತಿತ್ತು. ಆದರೆ ಆಗಸ್ಟ್ 1ರಿಂದ ಈ ಬದಲಾವಣೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ..
ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ವಿವಾದ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾದ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಜನಾಕ್ರೋಶದ ಬಳಿಕ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಬೆಂಗಳೂರಿನ ಪ್ರಸಿದ್ಧ ‘ಊರ್ವಶಿ’ ಚಿತ್ರಮಂದಿರದಲ್ಲಿ ಕೂಡ ‘ಜನ ನಾಯಗನ್’ ಬದಲಿಗೆ ಕನ್ನಡದ ‘ಕರಾವಳಿ’ ಸಿನಿಮಾವನ್ನು ಪ್ರದರ್ಶಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ‘ಊರ್ವಶಿ’ ಥಿಯೇಟರ್ನಲ್ಲಿ ‘ಜನ ನಾಯಗನ್’ ಪ್ರದರ್ಶನ ಕಾಣುತ್ತಿತ್ತು. ಆದರೆ ಆಗಸ್ಟ್ 1ರಿಂದ ಈ ಬದಲಾವಣೆ ಮಾಡಲಾಗಿದೆ. ಚಿತ್ರಮಂದಿರದ ಮುಂಭಾಗದಲ್ಲಿ ಇದ್ದ ತಮಿಳು ಸಿನಿಮಾದ ಪೋಸ್ಟರ್ಗಳನ್ನು ತೆಗೆದುಹಾಕಲಾಗಿದೆ. ಕಾವೇರಿ ವಿವಾದ ಬಗೆಹರಿಯುವ ತನಕ ಕರ್ನಾಟಕದಲ್ಲಿ ತಮಿಳು ಸಿನಿಮಾಗಳಿಗೆ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
