ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಮುಖ್ಯಸ್ಥ ವಿನೀತ್ ಗುಪ್ತಾ ಸಲಹೆ
Cauvery Water Dispute: ಕಾವೇರಿ ನೀರು ಹಂಚಿಕೆ ವಿವಾದ ತಾರಕಕ್ಕೇರಿದ್ದು, ಸಂಕಷ್ಟ ಸೂತ್ರ ಪಾಲಿಸುವಂತೆ CWRC ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ಸಲಹೆ ನೀಡಿದೆ. ಮಳೆ ಕೊರತೆ ಮತ್ತು ನೀರಿನ ಸಮಸ್ಯೆಯಿಂದ ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಬಿತ್ತನೆಗೂ ನೀರಿಲ್ಲದೆ ಆತಂಕದಲ್ಲಿದ್ದಾರೆ. ಇದರ ನಡುವೆ ಬಿಜೆಪಿ ನಿಯೋಗ ಬರ ಅಧ್ಯಯನ ನಡೆಸಿದೆ.
ನವದೆಹಲಿ, ಜುಲೈ 29: ಕಾವೇರಿ ನೀರು ಹಂಚಿಕೆ ವಿವಾದ ತಾರಕಕ್ಕೇರಿದ್ದು, ಸಂಕಷ್ಟ ಸೂತ್ರ ಪಾಲಿಸುವಂತೆ CWRC (ಕಾವೇರಿ ನೀರು ನಿಯಂತ್ರಣ ಸಮಿತಿ) ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ಸಲಹೆ ನೀಡಿದೆ. CWRC ಮುಖ್ಯಸ್ಥ ವಿನೀತ್ ಗುಪ್ತಾ ಈ ಶಿಫಾರಸು ಮಾಡಿದ್ದಾರೆ. ಇದೇ ವೇಳೆ, ಬಿಜೆಪಿ ನಿಯೋಗವು ಕನಕಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬರ ಅಧ್ಯಯನ ನಡೆಸಿದೆ. ವಿಪಕ್ಷ ನಾಯಕ ಆರ್. ಅಶೋಕ್ ದಾವಣಗೆರೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಮತ್ತು 10,000 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 29, 2026 05:27 PM
Loading...
Unable to load recommendations.
Follow Us
