ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು: ಮಂಡ್ಯದಲ್ಲಿ ಭುಗಿಲೆದ್ದ ರೈತರ ಪ್ರತಿಭಟನೆ
ಕಾವೇರಿ ನೀರು ವಿವಾದ ತಾರಕಕ್ಕೇರಿದೆ. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ CWRC ಶಿಫಾರಸು ಮಾಡಿದ್ದು, ಮಂಡ್ಯ ಮತ್ತು ಮೈಸೂರು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆಗಳು ತೀವ್ರಗೊಂಡಿವೆ. ಈ ನಿರ್ಧಾರವನ್ನು ರೈತರು ಮರಣ ಶಾಸನ ಎಂದು ಕರೆದಿದ್ದಾರೆ.
ಮಂಡ್ಯ, ಆಗಸ್ಟ್ 11: ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆ ಮಂಡ್ಯದಲ್ಲಿ ರೈತರು ಸಿಡಿದೆದ್ದಿದ್ದು, ಈ ಶಿಫಾರಸು ಮರಣ ಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಳಿವಳಿಕೆ ಇಲ್ಲದವರು ಮಾಡುವಂತೆ ಆದೇಶ ಮಾಡಿರುವ ಕಾರಣ CWMAನವರು CWRC ಶಿಫಾರಸನ್ನು ಅಮಾನತ್ತಿನಲ್ಲಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೇ ರಾಜ್ಯದ ಜನರು ಏನು ಮಾಡಬೇಕು? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರ ಹಿತವನ್ನು ಸಿಎಂ ಡಿಕೆಶಿಯವರು ಕಾಪಾಡಬೇಕು ಎಂದು ಆಗ್ರಹಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 11, 2026 03:52 PM
Loading...
Unable to load recommendations.
Follow Us
