ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕನ್ನು ವಂಚಿಸಿರುವ ಆರೋಪದಲ್ಲಿ ಸಿಸಿಬಿಯಿಂದ ರಾಕ್​ಲೈನ್ ವೆಂಕಟೇಶ್ ಮಗನ ವಿಚಾರಣೆ!

ಹಾಗೆ ನೋಡಿದರೆ, ರಾಕ್ ಲೈನ್ ಬೇಕಾದಷ್ಟು ಸಂಪಾದನೆ ಮಾಡಿದ್ದಾರೆ. ಅವರನ್ನು ಕುಬೇರರ ಪಟ್ಟಿಯಲ್ಲಿ ಸೇರಿಸಲು ಅಡ್ಡಿಯಿಲ್ಲ. ಹತ್ತು ತಲೆಮಾರುಗಳು ಕುಳಿತು ತಿನ್ನುವಷ್ಟು ಸಂಪಾದನೆ ಮಾಡಿದ್ದಾರೆಂದು ಅವರ ಆಪ್ತರು ಹೇಳುತ್ತಾರೆ. ಪೊಲೀಸರು ಅಭಿಲಾಷ್ ವಿಚಾರಣೆ ನಡೆಸುವಾಗ ಹಣ ವರ್ಗಾವಣೆ ಆಗಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕನ್ನು ವಂಚಿಸಿರುವ ಆರೋಪದಲ್ಲಿ ಸಿಸಿಬಿಯಿಂದ ರಾಕ್​ಲೈನ್ ವೆಂಕಟೇಶ್ ಮಗನ ವಿಚಾರಣೆ!
|

Updated on: Dec 23, 2023 | 5:32 PM

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರಾಕ್​ಲೈನ್ ವೆಂಕಟೇಶ್ (Rockline Venkatesh) ನಿಸ್ಸಂದೇಹವಾಗಿ ದೊಡ್ಡ ಹೆಸರು. 60-ವರ್ಷ ವಯಸ್ಸಿನ ವೆಂಕಟೇಶ್ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಹಲವಾರು ಚಿತ್ರಗಳನನ್ನು ನಿರ್ಮಿಸಿ ಒಬ್ಬ ಯಶಸ್ವೀ ನಿರ್ಮಾಪಕ (film producer) ಅನಿಸಿಕೊಂಡಿದ್ದ್ದಾರೆ. ವಿಷಯ ಹೀಗಿರುವಾಗ ಅವರ ಮಗ ವೆಂಕಟೇಶ್ ಅಭಿಲಾಷ್ ಗೆ (Venkatesh Abhilash) ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ ನಿಂದ ಸಾಲ ಪಡೆಯುವ ಕೇಡು ಯಾಕೆ ಎದುರಾಯಿತೋ ಗೊತ್ತಾಗುತ್ತಿಲ್ಲ. ವಿಷಯವೇನೆಂದರೆ, ಫೇಕ್ ಕಾಗದ ಪತ್ರಗಳನ್ನು ಸೃಷ್ಟಿಸಿ ಬ್ಯಾಂಕೊಂದನ್ನು ವಂಚಿಸಿದ ಆರೋಪದಲ್ಲಿ ನಗರದ ಸಿಸಿಬಿ ಪೊಲೀಸ್ 5-ಜನರ ತಂಡವೊಂದನ್ನು ಬಂಧಿಸಿದ್ದು ಅವರ ಪೈಕಿ ಅಭಿಲಾಷ್ ಒಬ್ಬರೆಂದು ಆರೋಪಿಸಲಾಗಿದೆ. ಇದೇ ಹಿನ್ನೆಲೆಯಲ್ಲಿ ಅಭಿಲಾಷ್ ರನ್ನು ಸಿಸಿಬಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಬಳಿಕ ಅವರು ಮಾಧ್ಯಮಗಳ ಕೆಮೆರಾದಿಂದ ತಪ್ಪಿಸಿಕೊಂಡು ವೇಗವಾಗಿ ತನ್ನ ಕಾರಿನತ್ತ ನಡೆದು ಹೋಗುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​