AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಆಪ್ತ ಧನ್ವೀರ್ ಮೇಲೆ ಅನುಮಾನ; ಕರೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ದರ್ಶನ್ ಆಪ್ತ ಧನ್ವೀರ್ ಮೇಲೆ ಅನುಮಾನ; ಕರೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ರಾಜೇಶ್ ದುಗ್ಗುಮನೆ
|

Updated on: Nov 10, 2025 | 10:19 AM

Share

ಜೈಲಿನಲ್ಲಿ ರಾಜಾತಿಥ್ಯ ಸಿಗೋ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣದ ಬಗ್ಗೆ ಚರ್ಚೆ ಶುರುವಾಗಿದೆ. ಇದು ಹಳೆಯ ವಿಡಿಯೋ ಎಂದು ಅಧಿಕಾರಿಗಳು ಹೇಳುತ್ತಿದ್ದರಾದರೂ ಅದು ನಿಜವಲ್ಲ. ಈಗ ದರ್ಶನ್ ಆಪ್ತ ಧನ್ವಿರ್​ನ ಕರೆಸಿ ಸಿಸಿಬಿ ವಿಚಾರಣೆ ನಡೆಸಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್​ನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸದ್ಯ ಜೈಲಿನ ವಿಡಿಯೋನ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಇದೆ. ಈ ಕಾರಣದಿಂದಲೇ ಧನ್ವೀರ್ ವಿಚಾರಣೆ ನಡೆಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಹಾಗಾಗಿ ವಿಚಾರಣೆ ನಡೆಸಿ ಅವರನ್ನು ಸಿಸಿಬಿ ಪೊಲೀಸರು ಕಳುಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More