ಚೈತ್ರಾ ಕುಂದಾಪುರ ಅಸ್ಪತ್ರೆಯಿಂದ ಮಹಿಳಾ ಸಾಂತ್ವನ ಕೇಂದ್ರಕ್ಕೆ; ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಪುನರಾರಂಭ

ಚೈತ್ರಾ ಕುಂದಾಪುರ ಅಸ್ಪತ್ರೆಯಿಂದ ಮಹಿಳಾ ಸಾಂತ್ವನ ಕೇಂದ್ರಕ್ಕೆ; ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಪುನರಾರಂಭ
| Updated By: Digi Tech Desk

Updated on:Sep 19, 2023 | 11:08 AM

ನಿನ್ನೆ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೈತ್ರಾಳನ್ನು ನಗರದ ಮಹಿಳಾ ಸಾಂತ್ವನ ಕೇಂದ್ರವೊಂದಕ್ಕೆ ಕರೆದೊಯ್ಯಲಾಗಿತ್ತು. ಕಳೆದ ಶುಕ್ರವಾರ ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಅಸ್ವಸ್ಥಗೊಂಡವಳಂತೆ ನಟಿಸಿದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಎಲ್ಲ ಪ್ಯಾರಾಮೀಟರ್ಸ್ ನಾರ್ಮಲ್ ಆಗಿ ಕೆಲಸ ಮಾಡುತ್ತಿವೆ ಎಂದು ವೈದ್ಯರು ಹೇಳಿದ್ದರು.

ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govind Babu Pujari) ರೂ. 5 ಕೋಟಿ ವಂಚಿಸಿದ ಅರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರಳ (Chaitra Kundapura) ವಿಚಾರಣೆ ಇಂದು ಮುಂದುವರಿಯಲಿದೆ. ವಿಡಿಯೋದಲ್ಲಿ ಕಾಣುತ್ತಿರುವ ಹಾಗೆ ನಗರದ ಮಹಿಳಾ ಸಾಂತ್ವನ ಕೇಂದ್ರವೊಂದರಿಂದ ಅವಳನ್ನು ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ (CCB Office) ಕರೆತರಲಾಯಿತು. ಕಚೇರಿಗೆ ಬಂದಾಗ ಚೈತ್ರಾ ಮೊದಲಿನ ಹಾಗೆ ಮಾಧ್ಯಮದವರ ಕಡೆ ನೋಡುತ್ತಾ ಪಾಸಿಂಗ್ ಹೇಳಿಕೆ ನೀಡುವ ಸಾಹಸವೇನೂ ಮಾಡಲಿಲ್ಲ. ನಿನ್ನೆ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೈತ್ರಾಳನ್ನು ನಗರದ ಮಹಿಳಾ ಸಾಂತ್ವನ ಕೇಂದ್ರವೊಂದಕ್ಕೆ ಕರೆದೊಯ್ಯಲಾಗಿತ್ತು. ನಿಮಗೆ ಚೆನ್ನಾಗಿ ನೆನಪಿದೆ, ಕಳೆದ ಶುಕ್ರವಾರ ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಅಸ್ವಸ್ಥಗೊಂಡವಳಂತೆ ನಟಿಸಿದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಎಲ್ಲ ಪ್ಯಾರಾಮೀಟರ್ಸ್ ನಾರ್ಮಲ್ ಆಗಿ ಕೆಲಸ ಮಾಡುತ್ತಿವೆ ಎಂದು ವೈದ್ಯರು ಹೇಳಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ

Published On - 10:38 am, Tue, 19 September 23

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ