ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ

Updated on: Sep 06, 2024 | 10:42 PM

ಚಾರ್ಜ್​​ಶೀಟ್​ ಸಲ್ಲಿಕೆ ಆದ ಬಳಿಕ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದ ಅನೇಕ ವಿವರಗಳು ಹೊರಬರುತ್ತಿವೆ. ಶಾಕಿಂಗ್​ ವಿಡಿಯೋ ಮತ್ತು ಫೋಟೋಗಳು ಕೂಡ ಬಹಿರಂಗ ಆಗಿವೆ. ಈ ಪ್ರಕರಣದಲ್ಲಿ ದರ್ಶನ್​, ಪವಿತ್ರಾ ಗೌಡ ಮುಂತಾದ ಆರೋಪಿಗಳಿಗೆ ಆತಂಕ ಹೆಚ್ಚಾಗಿದೆ. ಬೆಂಗಳೂರು ಪೊಲೀಸರಿಗೆ ನೂರಾರು ಬಗೆಯ ಸಾಕ್ಷಿಗಳು ಸಿಕ್ಕಿವೆ. ಸಿಸಿಟಿವಿ ದೃಶ್ಯಗಳ ಕೂಡ ಲಭ್ಯವಾಗಿವೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಯಿತು. ಹತ್ಯೆ ನಡೆದ ಬಳಿಕ ಆತನ ಶವವನ್ನು ರಾಜಕಾಲುವೆಗೆ ಎಸೆಯಲಾಯಿತು. ಶವ ಎಸೆದು ತೆರಳಿದ ಆರೋಪಿಗಳ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ದರ್ಶನ್​, ವಿನಯ್​, ಪವಿತ್ರಾ ಗೌಡ ಮುಂತಾದವರು ಈ ಕೇಸ್​ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ. ಸಾಕ್ಷಿಗಳು ಬಲವಾಗಿ ಇರುವುದರಿಂದ ಆರೋಪಿಗಳಿಗೆ ನಡುಕ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More