AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಕೇಂದ್ರವು ₹ 300 ಇಳಿಸಿ ಈಗ ₹ 50 ರಷ್ಟು ಮಾತ್ರ ಹೆಚ್ಚಿಸಿದೆ: ಸಿಟಿ ರವಿ

ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಕೇಂದ್ರವು ₹ 300 ಇಳಿಸಿ ಈಗ ₹ 50 ರಷ್ಟು ಮಾತ್ರ ಹೆಚ್ಚಿಸಿದೆ: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 08, 2025 | 12:41 PM

Share

ರಾಜ್ಯ ಬಿಜೆಪಿಗೆ ಇದು ಕಪಾಳಮೋಕ್ಷ ಹೇಗಾಗುತ್ತದೆ ಮತ್ತು ಜನಾಕ್ರೋಶ ಯಾತ್ರೆಗೆ ಹಿನ್ನಡೆ ಯಾಕಾಗುತ್ತದೆ ಎಂದು ಪ್ರಶ್ನಿಸಿದ ರವಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀರು, ಹಾಲು ಮತ್ತು ಕಸದ ಮೇಲೂ ತೆರಿಗೆ ವಿಧಿಸುತ್ತಿದೆ, ರಾಜ್ಯದಲ್ಲಿ ಡೀಸೆಲ್ ಬೆಲೆಯನ್ನು ಅದು ₹ 5.93 ಏರಿಕೆ ಮಾಡಿದೆ, ಅಂಕಿ ಅಂಶಗಳು ಸತ್ಯವನ್ನು ಮರೆಮಮಾಚುವುದಿಲ್ಲ ಎಂದು ಹೇಳಿದರು.

ಮೈಸೂರು, ಏಪ್ರಿಲ್ 8: ರಾಜ್ಯ ಸರ್ಕಾರವು ತಾನು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ಕೇಂದ್ರ ಸರ್ಕಾರ (Central Government) ಅಡುಗೆ ಅನಿಲ  ಸಿಲಿಂಡರ್ ಬೆಲೆಯನ್ನು ₹ 50ಹೆಚ್ಚಿಸಿರುವುದರ ಜೊತೆ ಹೋಲಿಸಿ ತನ್ನ ಕ್ರಮವನ್ನು ಸಮರ್ಥನೆ ಮಾಡಿಕೊಳ್ಳಬಾರದು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹೇಳಿದರು. ಅಂಕಿ ಅಂಶಗಳೊಂದಿಗೆ ಸತ್ಯವನ್ನು ಮನವರಿಕೆ ಮಾಡಿಕೊಳ್ಳುವ ಅವಶ್ಕತೆ ಎಲ್ಲರಿಗೂ ಇದೆ, ಆಗಸ್ಟ್ 2023 ರಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ₹ 300 ರಷ್ಟು ಕಡಿಮೆ ಮಾಡಿ ಈಗ ₹ 50 ಹೆಚ್ಚಿಸಿದೆ, ರಾಜ್ಯ ಸರ್ಕಾರವೂ ಸ್ಟ್ಯಾಂಪ್ ಡ್ಯೂಟಿಯನ್ನು ಶೇಕಡ 50ರಷ್ಟು ಕಡಿಮೆ ಮಾಡಿ ಶೇಕಡ 25 ರಷ್ಟು ಹೆಚ್ಚು ಮಾಡಲಿ, ಯಾರು ಬೇಡವೆನ್ನುತ್ತಾರೆ ಎಂದು ರವಿ ಹೇಳಿದರು.

ಇದನ್ನೂ ಓದಿ:  LPG Cylinder Price: ದೇಶದ ಜನತೆಗೆ ಸಿಹಿ ಸುದ್ದಿ, ಎಲ್​​ಪಿಜಿ ಸಿಲಿಂಡರ್​ ​ಬೆಲೆ ಇಳಿಕೆ !

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.