ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಕೇಂದ್ರವು ₹ 300 ಇಳಿಸಿ ಈಗ ₹ 50 ರಷ್ಟು ಮಾತ್ರ ಹೆಚ್ಚಿಸಿದೆ: ಸಿಟಿ ರವಿ
ರಾಜ್ಯ ಬಿಜೆಪಿಗೆ ಇದು ಕಪಾಳಮೋಕ್ಷ ಹೇಗಾಗುತ್ತದೆ ಮತ್ತು ಜನಾಕ್ರೋಶ ಯಾತ್ರೆಗೆ ಹಿನ್ನಡೆ ಯಾಕಾಗುತ್ತದೆ ಎಂದು ಪ್ರಶ್ನಿಸಿದ ರವಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀರು, ಹಾಲು ಮತ್ತು ಕಸದ ಮೇಲೂ ತೆರಿಗೆ ವಿಧಿಸುತ್ತಿದೆ, ರಾಜ್ಯದಲ್ಲಿ ಡೀಸೆಲ್ ಬೆಲೆಯನ್ನು ಅದು ₹ 5.93 ಏರಿಕೆ ಮಾಡಿದೆ, ಅಂಕಿ ಅಂಶಗಳು ಸತ್ಯವನ್ನು ಮರೆಮಮಾಚುವುದಿಲ್ಲ ಎಂದು ಹೇಳಿದರು.
ಮೈಸೂರು, ಏಪ್ರಿಲ್ 8: ರಾಜ್ಯ ಸರ್ಕಾರವು ತಾನು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ಕೇಂದ್ರ ಸರ್ಕಾರ (Central Government) ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹ 50ಹೆಚ್ಚಿಸಿರುವುದರ ಜೊತೆ ಹೋಲಿಸಿ ತನ್ನ ಕ್ರಮವನ್ನು ಸಮರ್ಥನೆ ಮಾಡಿಕೊಳ್ಳಬಾರದು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹೇಳಿದರು. ಅಂಕಿ ಅಂಶಗಳೊಂದಿಗೆ ಸತ್ಯವನ್ನು ಮನವರಿಕೆ ಮಾಡಿಕೊಳ್ಳುವ ಅವಶ್ಕತೆ ಎಲ್ಲರಿಗೂ ಇದೆ, ಆಗಸ್ಟ್ 2023 ರಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ₹ 300 ರಷ್ಟು ಕಡಿಮೆ ಮಾಡಿ ಈಗ ₹ 50 ಹೆಚ್ಚಿಸಿದೆ, ರಾಜ್ಯ ಸರ್ಕಾರವೂ ಸ್ಟ್ಯಾಂಪ್ ಡ್ಯೂಟಿಯನ್ನು ಶೇಕಡ 50ರಷ್ಟು ಕಡಿಮೆ ಮಾಡಿ ಶೇಕಡ 25 ರಷ್ಟು ಹೆಚ್ಚು ಮಾಡಲಿ, ಯಾರು ಬೇಡವೆನ್ನುತ್ತಾರೆ ಎಂದು ರವಿ ಹೇಳಿದರು.
ಇದನ್ನೂ ಓದಿ: LPG Cylinder Price: ದೇಶದ ಜನತೆಗೆ ಸಿಹಿ ಸುದ್ದಿ, ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ !
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

