ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿ ಕೂಡ ಕೇಂದ್ರ ಬಿಡುಗಡೆ ಮಾಡಿಲ್ಲ: ಶಿವಲಿಂಗೇಗೌಡ

Updated on: Sep 03, 2024 | 4:01 PM

ಕೇಂದ್ರ ಸರ್ಕಾರದ ಅನುದಾನಗಳನ್ನು ಆಧಾರವಾಗಿಟ್ಟುಕೊಂಡೇ ರಾಜ್ಯ ಸರ್ಕಾರ ಹಲವಾರು ಯೋಜನೆಗಳನನ್ನು ರೂಪಿಸಿದೆ, ಕೇಂದ್ರದಿಂದ ಹಣ ಬಿಡುಗಡೆಯಾಗದ ಕಾರಣ ಯೋಜನೆಗಳು ಅರಂಭಗೊಂಡಿಲ್ಲ, ಇನ್ನೂ ದಿನಗಳವರೆಗೆ ರಾಜ್ಯ ಸರ್ಕಾರ ಕಾದು ನೋಡಲು ಸಿದ್ಧವಿದೆ ಎಂದು ಶಾಸಕ ಹೇಳಿದರು.

ಹಾಸನ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ ₹ 5,300 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದರು. ಅದರೆ ಬೊಮ್ಮಾಯಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಬರಲಿಲ್ಲ ಮತ್ತು ಇದುವರೆಗೆ ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ: ಸಿಎಂ ಬಸವಾರಾಜ ಬೊಮ್ಮಾಯಿ  

Published on: Sep 03, 2024 03:55 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More