ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದೆಹಲಿಯ ಶಕರ್ಪುರ ಪೊಲೀಸ್ ಠಾಣೆಯ ಡಿ ಬ್ಲಾಕ್ ಪ್ರದೇಶದಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಅಲ್ಲಿ ದರೋಡೆಕೋರರು ಮಹಿಳೆಯೊಬ್ಬಳನ್ನು ನಿರ್ದಯವಾಗಿ ನೆಲಕ್ಕೆ ಬೀಳಿಸಿಕೊಂಡು ದರೋಡೆ ಮಾಡಿ, ನಂತರ ಪರಾರಿಯಾಗಿದ್ದಾರೆ. ಈ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ರಹಸ್ಯವಾಗಿ ಹಿಂಬಾಲಿಸಿ ಆಕೆಯನ್ನು ಹಿಂದಿನಿಂದ ಹಿಡಿದು ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಚಿನ್ನದ ಕಿವಿಯೋಲೆಗಳನ್ನು ಕಸಿದುಕೊಳ್ಳುತ್ತಿರುವ ದೃಶ್ಯವನ್ನು ನೋಡಬಹುದು. ಇದರಿಂದ ಆ ಮಹಿಳೆ ಮೂರ್ಛೆ ಹೋಗಿ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆ ದರೋಡೆಕೋರ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ.
ನವದೆಹಲಿ, ಆಗಸ್ಟ್ 8: ದೆಹಲಿಯ ಶಕರ್ಪುರದಲ್ಲಿ ಆಘಾತಕಾರಿ (Shocking News) ರೀತಿಯಲ್ಲಿ ಕಳ್ಳರು ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು, ಆಕೆಯನ್ನು ಕೊಂದು ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ರಹಸ್ಯವಾಗಿ ಹಿಂಬಾಲಿಸಿ ಆಕೆಯನ್ನು ಹಿಂದಿನಿಂದ ಹಿಡಿದು ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಚಿನ್ನದ ಕಿವಿಯೋಲೆಗಳನ್ನು ಕಸಿದುಕೊಳ್ಳುತ್ತಿರುವ ದೃಶ್ಯವನ್ನು ನೋಡಬಹುದು. ಇದರಿಂದ ಆ ಮಹಿಳೆ ಮೂರ್ಛೆ ಹೋಗಿ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆ ದರೋಡೆಕೋರ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. ಈ ಘಟನೆ ನಡೆದ ಸ್ಥಳದಿಂದ ಕೆಲವೇ ಹೆಜ್ಜೆಗಳ ದೂರದಲ್ಲಿ ಶಹದಾರಾ ವಲಯ ಎಂಸಿಡಿ ಅಧ್ಯಕ್ಷರ ಮನೆ ಇದೆ. ಹೀಗಾಗಿ, ಅಲ್ಲಿನ ಜನರು ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

