‘ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ’: ಜಗದೀಶ್​ಗೆ ಚೈತ್ರಾ ಕ್ಲಾಸ್

Updated on: Oct 15, 2024 | 6:16 PM

ಚೈತ್ರಾ ಕುಂದಾಪುರ ಮೇಲೆ ಕೇಸ್​ ಆಗಿದ್ದು ಗೊತ್ತೇ ಇದೆ. ಆ ಪ್ರಕರಣಗಳ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಜಗದೀಶ್​ ಮಾತನಾಡಿದ್ದಕ್ಕೆ ಚೈತ್ರಾ ಗರಂ ಆಗಿದ್ದಾರೆ. ಇಬ್ಬರ ನಡುವೆ ಭಾರಿ ಜಗಳ ನಡೆದಿದೆ. ಜಗಳ ಮಾಡುವ ಭರದಲ್ಲಿ ಚೈತ್ರಾ ಕುಂದಾಪುರ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಇದಕ್ಕೆ ಜಗದೀಶ್​ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

‘ಚೈತ್ರಾ ಏನು ಮಾತಾಡ್ತಾಳೆ. ಆಕೆಗೆ ಇರುವ ರೀತಿ ನನಗೂ ಫಾಲೋವರ್ಸ್​ ಇದ್ದಾರೆ. ಆಕೆಯ ಮೇಲೆ 28 ಕೇಸ್ ಇದೆ’ ಎಂದು ಜಗದೀಶ್​ ಹೇಳಿದ್ದಾರೆ. ‘ತಾಕತ್ತಿದ್ದರೆ ಎದುರು ಬಂದು ನಿಂತು ಮಾತನಾಡು. ನನ್ನ ಕೇಸ್​ ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲ. 50 ಅಲ್ಲ, 100 ಕೇಸ್​ ಬೇಕಾದರೂ ಹಾಕಿಸಿಕೊಳ್ತೀನಿ. ಇವರ ಅಪ್ಪನಿಗೆ ಹೊಡೆದು ನಾನು ಕೇಸ್ ಹಾಕಿಸಿಕೊಂಡಿಲ್ಲ. ಯಾವಾನಾದ್ರೂ ಅಪ್ಪನಿಗೇ ಹೊಟ್ಟಿದ್ರೆ ನನ್ನ ಕೇಸ್​ ಬಗ್ಗೆ ನನ್ನ ಎದುರು ಬಂದು ಮಾತನಾಡಲಿ’ ಎಂದು ಚೈತ್ರಾ ಕುಂದಾಪುರ ಸವಾಲು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More