‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: 100 ದಿನ ಕಳೆದರೂ ಚೈತ್ರಾ ಹಳೇ ರಾಗ

Updated on: Jan 08, 2025 | 5:11 PM

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮಾಡಿಕೊಂಡ ಕಿರಿಕ್​ಗಳು ಒಂದೆರಡಲ್ಲ. ಹಾಗಾಗಿ ಅವರಿಗೆ ಅನೇಕರ ವಿರೋಧ ಇದೆ. ಪ್ರತಿ ಬಾರಿ ನಾಮಿನೇಟ್ ಆಗಿ ಬಚಾವ್​ ಆದಾಗಲೂ ಅವರು ಅಸಲಿ ಆಟ ಆರಂಭಿಸುವುದಾಗಿ ಹೇಳುತ್ತಿದ್ದರು. ಆದರೆ ನಿಜವಾದ ಆಟ ಆರಂಭ ಆಗಲೇ ಇಲ್ಲ. 100 ದಿನ ಕಳೆದರೂ ಕೂಡ ಚೈತ್ರಾ ಅವರು ಅದನ್ನೇ ಹೇಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಚೈತ್ರಾಗೆ ಫಿನಾಲೆ ಟಿಕೆಟ್​ ಸಿಗಬಾರದು ಎಂದು ಇನ್ನುಳಿದ ಸದಸ್ಯರು ಹೇಳಿದ್ದಾರೆ. ಒಬ್ಬೊಬ್ಬರು ಒಂದೊಂದು ಕಾರಣ ನೀಡಿದ್ದಾರೆ. ‘ತಪ್ಪು ಸರಿಮಾಡಿಕೊಳ್ಳುವ ಗುಣ ಚೈತ್ರಾ ಅವರಲ್ಲಿ ಇಲ್ಲ’ ಎಂದು ಧನರಾಜ್ ಹೇಳಿದ್ದಾರೆ. ‘ಚೈತ್ರಾ ಕಡೆಯಿಂದ ಪದೇ ಪದೇ ತಪ್ಪು ಆಗುತ್ತಿದೆ’ ಎಂದು ಗೌತಮಿ ಹೇಳಿದ್ದಾರೆ. ಆಗ ಚೈತ್ರಾ ಕಣ್ಣಿರು ಹಾಕಿದ್ದಾರೆ. ‘100 ದಿನವೂ ಈ ಮನೆಯಲ್ಲಿ ನಡೆದಿರುವುದು ಇದೇ. ಆಡೋಕೆ ಕೊಡುತ್ತಿರಲಿಲ್ಲ. ಟಾರ್ಗೆಟ್ ಮಾಡಿ ಆಟದಿಂದ ಹೊರಗೆ ಇಡುತ್ತಿದ್ದರು. ಆಡೋಕೆ ಈಗಿನ್ನೂ ಬರುತ್ತಿದ್ದೆ. ಅಲ್ಲಿಗೆ ಅಡ್ಡಗಾಲು ಹಾಕಿದರು’ ಎಂದು ಚೈತ್ರಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More