ನರಕದವರ ನೋವು ಹೆಚ್ಚಾಗಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಕಣ್ಣೀರು

Updated on: Oct 07, 2024 | 5:39 PM

‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡ ಹೊಸ ಪ್ರೋಮೋದಲ್ಲಿ ಚೈತ್ರಾ ಕುಂದಾಪುರ ಅವರ ವೈಫಲ್ಯ ಕಾಣಿಸಿದೆ. ಟಾಸ್ಕ್​ ಸೋತಿದ್ದಕ್ಕೆ ನರಕದವರು ಬೇಸರ ಮಾಡಿಕೊಂಡಿದ್ದಾರೆ. ಚೈತ್ರಾ ಕೂಡ ಕ್ಯಾಮೆರಾ ಮುಂದೆ ಬಂದು ಅತ್ತಿದ್ದಾರೆ. ಎರಡನೇ ವಾರದಲ್ಲಿ ಪೈಪೋಟಿ ಜೋರಾಗಿದೆ. ನರಕದಿಂದ ಸ್ವರ್ಗಕ್ಕೆ ಬರಬೇಕು ಎಂದು 7 ಮಂದಿ ಕಷ್ಟಪಡುತ್ತಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್ 11’ ಮನೆ ಎರಡು ಭಾಗವಾಗಿದ್ದು, ಒಂದು ಕಡೆ ಸ್ವರ್ಗದವರು ಇದ್ದಾರೆ. ಇನ್ನೊಂದು ಕಡೆ ನರಕದವರು ಇದ್ದಾರೆ. ಈ ಎರಡು ತಂಡಗಳ ನಡುವೆ ಟಾಸ್ಕ್​ ನಡೆಯುತ್ತಿದೆ. ಒಂದು ವೇಳೆ ಟಾಸ್ಕ್​ ಗೆದ್ದರೆ ನರಕದವರಿಗೆ ಉತ್ತಮವಾದ ಊಟ ಸಿಗುತ್ತದೆ. ಇಲ್ಲದಿದ್ದರೆ ಗಂಜಿ, ಮೊಸರನ್ನ ತಿಂದು ಬದುಕಬೇಕಾಗುತ್ತದೆ. ನರಕದವರು ಹೊಸ ಟಾಸ್ಕ್​ ಸೋಲಲು ಚೈತ್ರಾ ಕುಂದಾಪುರ ಕಾರಣ ಆದಂತಿದೆ. ಕ್ಯಾಮೆರಾ ಎದುರು ಬಂದು ಅವರು ಕಣ್ಣೀರು ಹಾಕಿದ್ದಾರೆ. ಟಾಸ್ಕ್​ ಸೋತಿದ್ದರಿಂದ ನರಕದ ಮಂದಿಯ ಕಷ್ಟ ಇನ್ನಷ್ಟು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More