ಬಿಗ್ ಬಾಸ್ ಮುಗಿದ ಬಳಿಕ ಎಲ್ಎಲ್ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಅವರು ಕಳೆದ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಔಟ್ ಆದರು. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಹೊರಗಿದ್ದಾರೆ. ಅವರು ಬಿಗ್ ಬಾಸ್ ಮುಗಿದ ಬಳಿಕ ಮುಂದಿನ ಯೋಜನೆಗಳು ಏನು ಎಂಬುದನ್ನು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಪೂರ್ಣಗೊಳಿಸಿದ್ದಾರೆ. ಹಾಗಾದರೆ ಬಿಗ್ ಬಾಸ್ ಜರ್ನಿ ಬಳಿಕ ಮುಂದೇನು? ಈ ಪ್ರಶ್ನೆಗೆ ಅವರು ಉತ್ತರ ಕೊಟ್ಟಿದ್ದಾರೆ. ‘ಎಲ್ಎಲ್ಬಿ ಓದಬೇಕು ಎಂದಿದೆ. ಮಾಡದ ತಪ್ಪಿಗೆ ಅನೇಕರು ಶಿಕ್ಷೆ ಅನುಭವಿಸುತ್ತಿದ್ದಾರೆ. ಅವರ ಪರ ನಿಲ್ಲಬೇಕಿದೆ’ ಎಂದಿದ್ದಾರೆ ಚೈತ್ರಾ ಕುಂದಾಪುರ. ಆ ವಿಡಿಯೋ ಇಲ್ಲಿದೆ. ಅವರು ಹೇಳಿದ್ದು ಏನು ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
