ಮದುವೆಗೆ 4 ದಿನ ಇರುವಾಗ ಆಹ್ವಾನಿಸಲು ಬಂದ ಚೈತ್ರಾ ₹ 5 ಲಕ್ಷಗಳಿಗೆ ಬೇಡಿಕೆಯಿಟ್ಟಳು: ಬಾಲಕೃಷ್ಣ ನಾಯ್ಕ್, ಚೈತ್ರಾ ತಂದೆ

ಅರುಣ್​ ಕುಮಾರ್​ ಬೆಳ್ಳಿ

Updated on: May 15, 2025 | 1:15 PM

ಯಾರಿಗೋ ₹ 5 ಕೋಟಿ ವಂಚನೆ ಮಾಡಿ ಚೈತ್ರಾ ತನ್ನ ತಂದೆಯ ಮಾನ ಕಳೆದಳು ಮತ್ತು ತನ್ನ ಮಾನವನ್ನೂ ಮಣ್ಣುಪಾಲು ಮಾಡಿದಳು ಎಂದು ಬಾಲಕೃಷ್ಣ ಹೇಳುತ್ತಾರೆ. ತಮ್ಮ ಕತೆ ಹಾಗಿರಲಿ, ಚೈತ್ರಾ ತನ್ನ ಕೃತ್ಯಗಳಿಂದ ಮದುವೆಯಾಗಿ ಗಂಡನೊಂದಿಗೆ ಸುಖವಾಗಿ ಮತ್ತು ನೆಮ್ಮದಿಯೊಂದಿಗೆ ಸಂಸಾರ ಮಾಡಿಕೊಂಡಿದ್ದ ತನ್ನಕ್ಕನ ಬದುಕನ್ನೂ ಸರ್ವನಾಶ ಮಾಡಿದಳು ಎಂದು ಬಾಲಕೃಷ್ಣ ಹೇಳುತ್ತಾರೆ.

ಉಡುಪಿ, ಮೇ 15: ಮೊನ್ನೆಯಷ್ಟೇ ಮದುವೆಯಾದ ಚೈತ್ರಾ ಕುಂದಾಪುರ ಹೆಸರಿಗೆ ಈಗ ಸೆಲಿಬ್ರಿಟಿ ಸ್ಟೇಟಸ್ ಮೆತ್ತಿಕೊಂಡಿದೆ. ಆದರೆ ಅವರ ತಂದೆ ಬಾಲಕೃಷ್ಣ ನಾಯ್ಕ್ (Balakrishna Naik) ದೃಷ್ಟಿಯಲ್ಲಿ ಅವರು ಕೆಟ್ಟ ಮಗಳು ಮತ್ತು ಮನೆತನದ ಮಾನವನ್ನು ಹರಾಜಿಗೆ ಹಾಕಿದವಳು. ನಮ್ಮ ಉಡುಪಿ ವರದಿಗಾರನೊಂದಿಗೆ ಮಾತಾಡಿರುವ ಬಾಲಕೃಷ್ಣ, ಮದುವೆಗಿನ್ನೂ ಕೇವಲ 4 ದಿನ ಇರುವಾಗ ಚೈತ್ರಾ ನನ್ನನ್ನು ಮದುವೆಗೆ ಕರೆಯಲು ಬಂದಳು, ₹ 5 ಲಕ್ಷ ಕೊಡಬೇಕೆಂಬ ಷರತ್ತುನೊಂದಿಗೆ! ಆದರೆ ನಾನು, ನೀನೂ ಬೇಡ ನಿನ್ನ ಮದವೆಯೂ ಬೇಡ ಅಂತ ವಾಪಸ್ಸು ಕಳಿಸಿದೆ ಎಂದು ಹೇಳುತ್ತಾರೆ. ಚೈತ್ರಾ ತನ್ನನ್ನು ಗೌರವದಿಂದ ಕರೆದಿದ್ದರೆ ಹೋಗಿ ಆಶೀರ್ವದಿಸುತ್ತಿದ್ದೆ ಎಂದು ಬಾಲಕೃಷ್ಣ ಹೇಳುತ್ತಾರೆ.

ಇದನ್ನೂ ಓದಿ:  ಚೈತ್ರಾ ಕುಂದಾಪುರ ಮದುವೆಯಲ್ಲಿ ಉಗ್ರಂ ಮಂಜು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.