‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?

Updated on: Sep 29, 2024 | 9:57 AM

ಚೈತ್ರಾ ಕುಂದಾಪುರ ಕೂಡ ಈ ಬಾರಿಯ ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಚೈತ್ರಾ ಕುಂದಾಪುರ ಹಿಂದೂಪರ ಭಾಷಣಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಕೆಲವು ಸಂದರ್ಭದಲ್ಲಿ ದ್ವೇಷ ಭಾಷಣಗಳನ್ನು ಮಾಡಿದ ಆರೋಪವೂ ಚೈತ್ರಾ ಮೇಲಿದೆ. ಬಿಜೆಪಿ ಟಿಕೇಟ್ ಕೊಡಿಸೋದಾಗಿ ಭಾರಿ ಮೊತ್ತದ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದರು.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈಗ ಚೈತ್ರಾ ಕುಂದಾಪುರ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಅವರಿಗೆ ಸ್ವರ್ಗ ಸಿಗುತ್ತದೆಯೇ ಅಥವಾ ನರಕ ಸಿಗುತ್ತದೆಯೋ ಎನ್ನುವ ಕತೂಹಲ ಮೂಡಿದೆ. ಅವರ ವಿಟಿನ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆದಿದೆ. ಅವರು ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More