ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್

Updated on: Sep 30, 2024 | 8:31 AM

ಹಿಂದೂ ಕಾರ್ಯಕರ್ತೆ ಆಗಿ ಚೈತ್ರಾ ಕುಂದಾಪುರ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ವಂಚನೆ ಆರೋಪ ಇದೆ. ಈಗ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಿಕೆಟ್ ಸಿಕ್ಕಿದೆ. ಅವರಿಗೆ ಮೊದಲ ದಿನವೇ ಹೊಸ ಬಿರುದು ಕೂಡ ಸಿಕ್ಕಿದೆ ಅನ್ನೋದು ವಿಶೇಷ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೊದಲ ಪ್ರೋಮೋ ರಿಲೀಸ್ ಆಗಲಿದೆ. ಇದರಲ್ಲಿ ಹಲವು ವಿಚಾರಗಳನ್ನು ರಿವೀಲ್ ಮಾಡಲಾಗಿದೆ. ಗೌತಮಿ ಜಾಧವ್ ಅವರು ಟೋಪನ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಅವರನ್ನು ಮನೆಯ ಕೆಲವರು ಟೀಕೆ ಮಾಡಿದ್ದರು. ಇದಕ್ಕೆ ಅವರು ಕಣ್ಣೀರು ಹಾಕಿದ್ದಾರೆ. ಚೈತ್ರಾ ಕುಂದಾಪುರ್​ಗೆ ‘ಲೇಡಿ ಡಾನ್’ ಎಂಬ ಬಿರುದನ್ನು ಜಗದೀಶ್ ಅವರು ಕೊಟ್ಟಿದ್ದಾರೆ. ಆ ಪ್ರೋಮೋ ಇಲ್ಲಿದೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More