ನಿನ್ನೆ ಸಿಸಿಬಿ ವಿಚಾರಣೆ ವೇಳೆ ನಡೆದಿದ್ದು ಒಂದು ಡ್ರಾಮಾ, ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾರೆ: ಜಿ ಪರಮೇಶ್ವರ, ಗೃಹ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Sep 16, 2023 | 6:42 PM

ಚೈತ್ರಾ ಪ್ರಕರಣ ಚುನಾವಣಾ ರಾಜಕೀಯಕ್ಕೆ ಸಂಬಂಧಪಟ್ಟಿದ್ದು ಮತ್ತು ಇದರಲ್ಲಿ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಇನ್ವಾಲ್ವ್ ಆಗಿರುವ ಸಾಧ್ಯತೆ ಇರೋದ್ರಿಂದ ತನಿಖೆ ಮುಗಿಯದ ಹೊರತು ಮಾತಾಡುವುದು ತಪ್ಪಾಗುತ್ತದೆ ಎಂದು ಪರಮೇಶ್ವರ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಚೈತ್ರಾ ಕುಂದಾಪರ (Chaitra Kundapura) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ (G Parameshwara), ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿರುವುದರಿಂದ ತನಿಖೆ (investigation) ಪೂರ್ಣಗೊಳ್ಳುವವರೆಗೆ ಯಾವುದೇ ವಿಚಾರವನ್ನು ಮಾತಾಡುವುದಿಲ್ಲ ಎಂದು ಹೇಳಿದರು. ನಿನ್ನೆ ವಿಚಾರಣೆ ಸಮಯದಲ್ಲಿ ಚೈತ್ರಾ ಪ್ರಜ್ಞೆ ತಪ್ಪಿ ಆಸ್ಪತ್ರೆ ಸೇರಿದ್ದು ಒಂದು ಡ್ರಾಮಾ ಅಂತ ಹೇಳಿದ ಸಚಿವರು ಆಕೆ ಚೆನ್ನಾಗಿದ್ದಾಳೆಮ ಆರೊಗ್ಯವಾಗಿದ್ದಾಳೆ ಅಂತ ಹೇಳಿದರು. ಚೈತ್ರಾ ಪ್ರಕರಣ ಚುನಾವಣಾ ರಾಜಕೀಯಕ್ಕೆ ಸಂಬಂಧಪಟ್ಟಿದ್ದು ಮತ್ತು ಇದರಲ್ಲಿ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಇನ್ವಾಲ್ವ್ ಆಗಿರುವ ಸಾಧ್ಯತೆ ಇರೋದ್ರಿಂದ ತನಿಖೆ ಮುಗಿಯದ ಹೊರತು ಮಾತಾಡುವುದು ತಪ್ಪಾಗುತ್ತದೆ ಎಂದು ಪರಮೇಶ್ವರ ಹೇಳಿದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತು ತಲೆಮರೆಸಿಕೊಂಡಿರುವ ಹಿರೇಹಡಗಲಿ ಅಭಿನವ ಹಾಲಾಶ್ರೀ ಸ್ವಾಮಿ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು, ಅವರ ಹುಡುಕಾಟ ಜಾರಿಯಲ್ಲಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.