ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚೈತ್ರಾ ಕುಂದಾಪುರ ಅವರು ಹೊರ ಹೋಗಿ ಬಂದಿದ್ದರು. ಈ ವೇಳೆ ಹೊರಗಿನ ವಿಚಾರಗಳನ್ನು ಅವರು ಹೇಳಿದ್ದರು. ಈ ಕಾರಣಕ್ಕೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಇದು ಮತ್ತೆ ಮರುಕಳಿಸುವ ಸೂಚನೆ ಸಿಕ್ಕಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚೈತ್ರಾ ಕುಂದಾಪುರ ಅವರು ಮಾಡಿಕೊಳ್ಳುವ ಎಡವಟ್ಟುಗಳು ಒಂದೆರಡಲ್ಲ. ಈ ಮೊದಲು ಹೊರಗಿನ ವಿಚಾರಗಳನ್ನು ಎಲ್ಲರ ಎದುರು ಹೇಳಿ ಅವರು ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಈ ಕಾರಣಕ್ಕೆ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಈಗ ಸುದೀಪ್ ಅವರು ಮತ್ತೆ ಕ್ಲಾಸ್ ತೆಗೆದುಕೊಳ್ಳುವ ಸೂಚನೆ ಸಿಕ್ಕಿದೆ. ಉಸ್ತುವಾರಿ ಸರಿಯಾಗಿ ನಿರ್ವಹಿಸದ ಚೈತ್ರಾಗೆ ಸುದೀಪ್ ಕಣ್ಣೀರು ಹಾಕಿಸೋದು ಪಕ್ಕಾ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
