AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ರವರ್ತಿ ಸೂಲಿಬೆಲೆಯ ಟ್ವೀಟ್ ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ: ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ ಆಗಿರುವುದರಿಂದ ನಮಾಜಿಗೋಸ್ಕರ ವೇಳೆ ಬದಲಾಯಿಸಲಾಗಿದೆಯೇ ಅಂತ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಟ್ವೀಟನ್ನು ಉಲ್ಲೇಖಿಸಿದ ಮಧು ಬಂಗಾರಪ್ಪ, ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 06, 2024 | 1:00 PM

Share

ಮೈಸೂರು: ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಇಂದು ಮೈಸೂರಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತಾಡುವಾಗ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ವಿರುದ್ಧ ಏಕವಚನದಲ್ಲಿ ಹರಿಹಾಯ್ದರು. ವಿಷಯ ಸೂಲಿಬೆಲೆ ಟ್ವೀಟ್ ಗೆ ಸಂಬಂಧಿಸಿದ್ದು. ಎಸ್ಸೆಸ್ಸೆಲ್ಸಿಯ ಎಲ್ಲ ಪರೀಕ್ಷೆಗಳು ಬೆಳಗಿನ ಸೆಷನ್ ನಲ್ಲಿ ನಡೆಸಲಾಗುತ್ತಿದೆ ಅದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ ಆಗಿರುವುದರಿಂದ ನಮಾಜಿಗೋಸ್ಕರ ವೇಳೆ ಬದಲಾಯಿಸಲಾಗಿದೆಯೇ ಅಂತ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಟ್ವೀಟನ್ನು ಉಲ್ಲೇಖಿಸಿದ ಮಧು ಬಂಗಾರಪ್ಪ, ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕನಿಷ್ಟ ಸಾಮಾನ್ಯ ಜ್ಞಾನವನ್ನಾದರೂ ಆವರು ಪ್ರದರ್ಶಿಸಬೇಕಿತ್ತು, ಅವತ್ತು ಯಾಕೆ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಅಂತ ಯೋಚಿಸುವ ವ್ಯವಧಾನವೂ ಅವರಿಗಿಲ್ಲ, ಅಸಲು ವಿಷಯವೇನೆಂದರೆ ಅದೇ ದಿನ ದ್ವಿತೀಯ ಪರೀಕ್ಷೆಗಳು ಆರಂಭವಾಗಲಿದ್ದು, ಬೆಳಗ್ಗೆ ಆ ಪರೀಕ್ಷೆ ನಡೆಯಲಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಎಂದು ಹೇಳಿದ ಸಚಿವ, ಸೂಲಿಬೆಲೆಯ ಮನಸ್ಥಿತಿಯನ್ನು ತೆಗಳಿದರು. ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ಭಾವನಾತ್ಮಕ ವಿಷಯಗಳಿಂದ ಜನರ ತಲೆಕೆಡಿಸುವುದನ್ನು ನಿಲ್ಲಿಸಬೇಕು, ಕರ್ನಾಟಕದಲ್ಲಿ ಅದೆಲ್ಲ ನಡೆಯಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ