ನಾನು ಫೋನ್ ಮಾಡುವ ಮೊದಲೇ ಚಕ್ರವರ್ತಿ ಸೂಲಿಬೆಲೆಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಗೊತ್ತಾಗಿತ್ತು: ರಾಜಶೇಖರಾನಂದ ಸ್ವಾಮೀಜಿ

ಹಾಲಾಶ್ರೀ ಸ್ವಾಮಿ ಯುವ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡಿದ್ದ ಕಾರಣ ಅದರ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಅವರಿಗೆ ಫೋನ್ ಮಾಡಿದಾಗ ಅವರಿಗೆ ಅದಾಗಲೇ ವಿಷಯ ಗೊತ್ತಾಗಿತ್ತು ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳುತ್ತಾರೆ. ಚೈತ್ರಾ ತನಗೆ ಚೆನ್ನಾಗಿ ಗೊತ್ತು ಅಂತ ಹೇಳುವ ಸ್ವಾಮೀಜಿ ಆಕೆ ಬರೆದ ಲವ್ ಜಿಹಾದ್ ಪುಸ್ಕಕಕ್ಕೆ ತಾವೇ ಬೆನ್ನುಡಿ ಬರೆದಿದ್ದು ಅನ್ನುತ್ತಾರೆ.

|

Updated on: Sep 18, 2023 | 3:01 PM

ಮಂಗಳೂರು: ಚೈತ್ರಾ ಕುಂದಾಪುರ ಜಾರಿ ನಿರ್ದೇಶನಾಲಯಗೆ ಬರೆದಿರುವ ಪತ್ರದಲ್ಲಿ ವಜ್ರದೇಹಿ ಮಠದ ಶ್ರೀಗಳಾಗಿರುವ ರಾಜಶೇಖರಾನಂದ ಸ್ವಾಮೀಜಿ (Rajashekharananda Swamiji) ಅವರ ಹೆಸರರು ಕೂಡ ಪ್ರಸ್ತಾಪವಾಗಿದೆ. ಇದೇ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ವಾಹಿನಿಯ ಮಂಗಳೂರು ವರದಿಗಾರನೊಂದಿಗೆ ಮಾತಾಡಿರುವ ಸ್ವಾಮೀಜಿ ತಮ್ಮ ಹೆಸರು ಉಲ್ಲೇಖ ಅಗಿರುವುದಕ್ಕೆ ಕಾರಣ ತಿಳಿಸುತ್ತಾರೆ. ಅಸಲಿಗೆ ಹಿಂದೂ ಜಾಗರಣಾ ವೇದಿಕೆಯ ರಾಷ್ಟ್ರಿಯ ನಾಯಕರಾಗಿದ್ದ ಸತ್ಯಜಿತ್ ಸುರತ್ಕಲ್ (Satyajit Suratkal) ಎನ್ನುವವರು ತಪ್ಪು ಗ್ರಹಿಕೆಯಿಂದಾಗಿ, ರಾಜಶೇಖರಾನಂದ ಸ್ವಾಮೀಜಿ ಅವರೇ ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ರೂ. 1.5 ಕೋಟಿ ಪಡೆದಿದ್ದು ಅದನ್ನು ಕೂಡಲೇ ಹಿಂತಿರುಗಿಸುವಂತೆ ಫೋನ್ ಮಾಡಿದ್ದರಂತೆ. ಆರೋಪ ಕೇಳಿ ಕೋಪೋದ್ರಿಕ್ತರಾದ ಸ್ವಾಮೀಜಿ, ಸುರತ್ಕಲ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರಂತೆ. ನಂತರ ಸುರತ್ಕಲ್ ಅವರಿಗೆ ವಾಸ್ತವಾಂಶ ಗೊತ್ತಾಗಿ, ಹಣ ಸಂದಾಯವಾಗಿರೋದು ಅಭಿನವ ಹಾಲಾಶ್ರೀ ಸ್ವಾಮಿಗೆ (Abhinava Halashri Swamy) ಅಂತ ಹೇಳಿದರಂತೆ. ಆಗಲೂ ರಾಜಶೇಖರಾನಂದ ಸ್ವಾಮೀಜಿ ಅವರು ಸುರತ್ಕಲ್ ಮೇಲೆ ಕೆಂಡ ಕಾರಿದರಂತೆ. ಹಾಲಾಶ್ರೀ ಸ್ವಾಮಿ ಯುವ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡಿದ್ದ ಕಾರಣ ಅದರ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ (Chakravarty Sulibele) ಅವರಿಗೆ ಫೋನ್ ಮಾಡಿದಾಗ ಅವರಿಗೆ ಅದಾಗಲೇ ವಿಷಯ ಗೊತ್ತಾಗಿತ್ತು ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳುತ್ತಾರೆ. ಚೈತ್ರಾ ತನಗೆ ಚೆನ್ನಾಗಿ ಗೊತ್ತು ಅಂತ ಹೇಳುವ ಸ್ವಾಮೀಜಿ ಆಕೆ ಬರೆದ ಲವ್ ಜಿಹಾದ್ ಪುಸ್ಕಕಕ್ಕೆ ತಾವೇ ಬೆನ್ನುಡಿ ಬರೆದಿದ್ದು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್