ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ
ಚಲವಾದಿ ನಾರಾಯಣಸ್ವಾಮಿ ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆಯನ್ನು ಹಿಂದುತ್ವ ವಿರೋಧಿ ನಿಲುವುಗಳಿಗೆ ಹೋಲಿಸಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮುಖ್ಯಮಂತ್ರಿಗಳು ಒಂದು ತಿಂಗಳೊಳಗೆ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ನ ಪರಿಸ್ಥಿತಿ ಕೆಟ್ಟ ಹಣ್ಣುಗಳ ಬುಟ್ಟಿಗೆ ಸಮಾನವಾಗಿದೆ ಎಂದು ಬಣ್ಣಿಸಿ, ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಯನ್ನು ಸೂಚಿಸಿದರು.
ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಇನ್ನು ರಾಜಕೀಯ ನಿವೃತ್ತಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬದಲಾಗಿ ಕೋಮುವಾದಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಆದರೆ ಅವರೇ ಕೋಮುವಾದಿಗಳು ಎಂದು ತಿರುಗೇಟು ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

