AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ

ರೇಣುಕಾಸ್ವಾಮಿ ಅವರ ಆಕಸ್ಮಿಕ ಮರಣದಿಂದಾಗಿ ಅವರ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಕುಟುಂಬಕ್ಕೆ ಒಂದು ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಿ, ರೇಣುಕಾಸ್ವಾಮಿ ಅವರ ಪತ್ನಿ ಸಹನಾಗೆ ಸರ್ಕಾರಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ಮಠಗಳಲ್ಲಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ
ರಾಜೇಶ್ ದುಗ್ಗುಮನೆ
|

Updated on: Sep 15, 2025 | 8:53 AM

Share

ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಸಾವಿನಿಂದ ಅವರ ಕುಟುಂಬಕ್ಕೆ ಆಧಾರ ಆಗಿದ್ದವರೇ ಈಗ ಇಲ್ಲದಂತೆ ಆಗಿದೆ. ಇದರಿಂದ ಅವರ ಕುಟುಂಬಕ್ಕೆ ಜೀವನ ನಡೆಸೋದು ಅವರಿಗೆ ಕಷ್ಟ ಆಗುತ್ತಿದೆ. ಈಗ ರೇಣುಕಾಸ್ವಾಮಿ ಪತ್ನಿ ಸಹನಾಗೆ ಸರ್ಕಾರಿ ಕೆಲಸ ಕೊಡಿಸೋದಾಗಿ ಚಳ್ಳಕೆರೆ ಕೈ ಶಾಸಕ ಟಿ ರಘುಮೂರ್ತಿ ಭರವಸೆ ನೀಡಿದ್ದಾರೆ. ಇದರಿಂದ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಆಗಲಿ ಎಂಬುದು ರಘಮೂರ್ತಿ ಅವರ ಆಲೋಚನೆ.

ನಟ ದರ್ಶನ್ ಹಾಗೂ ಗ್ಯಾಂಗ್ ಮೇಲೆ ರೇಣುಕಾಸ್ವಾಮಿಯನ್ನು ಕೊಂದ ಆರೋಪ ಇದೆ. ಈ ಪ್ರಕರಣ ಕೋರ್ಟ್​ನಲ್ಲಿ ಇದೆ. ಆಗಸ್ಟ್ 15ರಂದು ‘ಟಿವಿ9 ಕನ್ನಡ’ ರೇಣುಕಾಸ್ವಾಮಿ ಕುಟುಂಬದ ಸ್ಥಿತಿ ಗತಿ ಬಗ್ಗೆ ವರದಿ ಮಾಡಿತ್ತು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಮನೆಗೆ ಚಳ್ಳಕೆರೆ ಕೈ ಶಾಸಕ ಟಿ ರಘುಮೂರ್ತಿ ಭೇಟಿ ನೀಡಿದ್ದಾರೆ. ರಘುಮೂರ್ತಿಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರೆಡ್ಡಿ, ರವಿಕುಮಾರ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಲಿಂಗರಾಜ್ ಸಾಥ್ ನೀಡಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ರಘುಮೂರ್ತಿ ಆತ್ಮಸ್ಥೈರ್ಯ ಹೇಳಿದ್ದಾರೆ. ಸದ್ಯ ಕುಟುಂಬಕ್ಕೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. ಇದೇ ವೇಳೆ ರೇಣುಕಾಸ್ವಾಮಿ ಪತ್ನಿ ಸಹನಾಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ
Image
ಆ ಒಂದು ಶಬ್ದ ಬಳಕೆ ಮಾಡಿದ್ದಕ್ಕೆ ಆಕ್ರೋಶ; ಕಪಿಲ್ ಶೋ ನಿಲ್ಲಿಸೋ ಎಚ್ಚರಿಕೆ

ಮುರುಘಾಮಠದ ಆಡಳಿತಾಧಿಕಾರಿ ಶಿವಯೋಗಿ ಕಳಸದ್​ ಅವರಿಗೆ ಕರೆ ಮಾಡಿ  ಮಠದ ಸಂಸ್ಥೆಯಲ್ಲಿ ಸಹನಾಗೆ ಕೆಲಸ ನೀಡಲು ಮನವಿ ಮಾಡಿದ್ದಾರೆ. ಸಿರಿಗೆರೆ ತರಳಬಾಳು ಮಠದ ಸಂಸ್ಥೆಯಲ್ಲೂ ಪ್ರಯತ್ನಕ್ಕೆ ಸಲಹೆ ನೀಡಿದ್ದಾರೆ. ಇನ್ನು, ಕೊನೆಯ ಪಕ್ಷ ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಕ್ಲರ್ಕ್ ಪೋಸ್ಟ್ ಕೊಡಿಸೋದಾಗಿ ಭರವಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್

ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಟಿವಿ9 ವರದಿ ಪರಿಣಾಮ ಶಾಸಕ ರಘುಮೂರ್ತಿ ಮನೆಗೆ ಬಂದಿದ್ದರು. ಅವರು ನಮ್ಮ ಕಷ್ಟ ಕೇಳಿದ್ದಾರೆ. ರಘುಮೂರ್ತಿ 1ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ. ಸೊಸೆ ಸಹನಾಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ಅವರಿಗೆ ಹಾಗೂ ಟಿವಿ9ಗೆ ಧನ್ಯವಾದ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು