ಕೈ ನೋವು ಇದ್ದರೂ ಪ್ರಾಣಿಗಳಿಗೆ ಮೇವು ಸಿದ್ಧಪಡಿಸಿದ ದರ್ಶನ್​; ವಿಡಿಯೋ ವೈರಲ್​

ಪ್ರಾಣಿಗಳೆಂದರೆ ದರ್ಶನ್​ ಅವರಿಗೆ ಎಲ್ಲಿಲ್ಲದ ಪ್ರೀತಿ. ಅನೇಕ ಪ್ರಾಣಿಗಳನ್ನು ಅವರು ಸಾಕಿದ್ದಾರೆ. ಅವುಗಳನ್ನು ಬಹಳ ಪ್ರೀತಿಯಿಂದ ಅವರು ನೋಡಿಕೊಳ್ಳುತ್ತಾರೆ. ಅದಕ್ಕೆ ಈ ವಿಡಿಯೋನೇ ಸಾಕ್ಷಿ. ಫಾರ್ಮ್​ ಹೌಸ್​ನಲ್ಲಿ ದರ್ಶನ್​ ಅವರು ಪ್ರಾಣಿಗಳ ಮೇವು ಕಟ್​ ಮಾಡಿದ್ದಾರೆ. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಫಾರ್ಮ್​ ಹೌಸ್​ನಲ್ಲಿ ಕಾಲ ಕಳೆದಿದ್ದಾರೆ.

ಕೈ ನೋವು ಇದ್ದರೂ ಪ್ರಾಣಿಗಳಿಗೆ ಮೇವು ಸಿದ್ಧಪಡಿಸಿದ ದರ್ಶನ್​; ವಿಡಿಯೋ ವೈರಲ್​
|

Updated on: May 10, 2024 | 10:03 PM

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ಅವರಿಗೆ ಇತ್ತೀಚೆಗೆ ಕೈ ಸರ್ಜರಿ ಆಯಿತು. ಅದರ ನಡುವೆಯೂ ಅವರು ಚುನಾವಣಾ ಪ್ರಚಾರ ಮಾಡಿದ್ದರು. ಈಗ ಫಾರ್ಮ್​ ಹೌಸ್​ನಲ್ಲಿ ಅವರು ಕಾಲ ಕಳೆಯುತ್ತಿದ್ದಾರೆ. ತಮ್ಮ ಫಾರ್ಮ್​ ಹೌಸ್​ನಲ್ಲಿ (Darshan Farmhouse) ದರ್ಶನ್​ ಅವರು ಅನೇಕ ಪ್ರಾಣಿಗಳನ್ನು ಸಾಕಿದ್ದಾರೆ. ಅವುಗಳನ್ನು ತುಂಬ ಕಾಳಜಿಯಿಂದ ಅವರು ನೋಡಿಕೊಳ್ಳುತ್ತಾರೆ. ಸದ್ಯ ಕೈ ನೋವು ಇದ್ದರೂ ಕೂಡ ದರ್ಶನ್​ ಅವರು ಪ್ರಾಣಿಗಳಿಗಾಗಿ ಮೇವು ಸಿದ್ಧಪಡಿಸಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಕಾಟೇರ’ ಸಿನಿಮಾದ ಗೆಲುವಿನಿಂದ ದರ್ಶನ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಡೆವಿಲ್​: ದಿ ಹೀರೋ’ (Devil The Hero) ಸಿನಿಮಾದ ಕಡೆಗೆ ಗಮನ ಹರಿಸಿದ್ದಾರೆ. ಇಂದು (ಮೇ 10) ಈ ಸಿನಿಮಾದ ಮೇಕಿಂಗ್​ ವಿಡಿಯೋವನ್ನು ದರ್ಶನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ನೋಡಿದ ಬಳಿಕ ಫ್ಯಾನ್ಸ್​ ನಿರೀಕ್ಷೆ ಹೆಚ್ಚಾಗಿದೆ. ‘ಡೆವಿಲ್​’ ಸಿನಿಮಾಗೆ ಪ್ರಕಾಶ್​ ವೀರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು